ಬಂಟ್ವಾಳ

ಜೋಡುಮಾರ್ಗ ಜೇಸೀಗೆ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪುರಸ್ಕಾರ

ಜೇಸೀ ಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನ ‘ಶಿಖರ ‘ ಕುಂದಾಪುರದ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ 5ರಂದು ಜರಗಿತು.
ಸಮಾರಂಭದಲ್ಲಿ ವಲಯ 15ರ ಅತ್ಯುತ್ತಮ 20 ಘಟಕಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು. ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ನೇತೃತ್ವದ  ಘಟಕದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜೇಸಿ ವಲಯ 15ರ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಸಮಾರಂಭದಲ್ಲಿ ನಿಕಟ ಪೂರ್ವ ವಲಯಾಧ್ಯಕ್ಷರಾದ ಸಂತೋಷ್, ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ನಿರ್ದೇಶಕ ಕಾರ್ತಿಕೇಯ ಮಧ್ಯಸ್ಥ, ಸೌಮ್ಯ ರಾಕೇಶ್ ಉಪಸ್ತಿತರಿದ್ದರು.  ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್,  ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್, ಕಾರ್ಯದರ್ಶಿ ಹರ್ಷರಾಜ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಅಮಿತಾ ಹರ್ಷರಾಜ್ ಘಟಕದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು. ಇದೇ ಸಂದರ್ಭ ದಲ್ಲಿ ಜೇಸೀ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್ ರಿಗೆ ಜೇಸೀ ಐ ಸೆನೆಟರ್ ಹಾಗೂ ಜೇಸೀ ಹರ್ಷರಾಜ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಸವಿತಾ ನಿರ್ಮಲ್, ಶನ್ ಪತ್ ಷರೀಪ್ ಇವರಿಗೆ ಎಚ್ ಜಿ ಎಫ್ ಪುರಸ್ಕಾರದ ಗೌರವಾರ್ಪಣೆ ಮಾಡಲಾಯಿತು .
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.