ಬಂಟ್ವಾಳ

ವಿದ್ಯಾರ್ಥಿಗಳ ಜ್ಞಾನಶಕ್ತಿ ವೃದ್ಧಿಗೆ ಚೆಸ್ ಪೂರಕ: ಉಮೇಶ್ ನಿರ್ಮಲ್


ರಾಜ ಮಹಾರಾಜರ ಕಾಲದಿಂದಲೂ ಪ್ರಸಿದ್ಧಿ ಪಡೆದ ಚದುರಂಗ ಆಟವು ವಿದ್ಯಾರ್ಥಿಗಳ ಮೆದುಳಿಗೆ ಶಕ್ತಿ ತುಂಬುವ ಆಟವಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿರುವುದು ತುಂಬಾ ಸಂತಸದ ವಿಷಯ ಎಂದು ಬಂಟ್ವಾಳ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಉಮೇಶ್ ನಿರ್ಮಲ್ ರವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಟೌನ್ ರೋಟರಿ ಕ್ಲಬ್, ಜೋಡುಮಾರ್ಗ ಜೇಸಿ ಸಹಯೋಗದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಚದುರಂಗ ಸ್ಫರ್ಧೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇವರುವಿದ್ಯಾರ್ಥಿಗಳಲ್ಲಿ ಏಕಾಗ್ರತೆ,ಗೆಲ್ಲುವ ಮನೋಭಾವ ಮೂಡಿಸುವ ಸ್ಫರ್ಧೆ ಚದುರಂಗ , ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಇಂದು ಚದುರಂU ಆಟದಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಫರ್ಧೆಗಳಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಸಂತಸದ ವಿಷಯ ಎಂದರು.

ಜೋಡುಮಾರ್ಗ ಜೇಸಿ ಅಧ್ಯಕ್ಷರಾದ ಸವಿತಾ ನಿರ್ಮಲ್, ದ.ಕ .ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಗೌರವ ಸಲಹೆಗಾರ ಗಂಗಾಧರ ರೈ ಮಾಣಿ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾದ ಜಗದೀಶ್ ಕಲ್ಲಡ್ಕ, ಇಂಟಾರ್‍ಯಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೀವಿದ್ಯಾ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ