ನಮ್ಮ ಕೈಗಳನ್ನು ಸ್ವಚ್ಛ ಮನಸ್ಸಿನ ಪ್ರಚೋದನೆಗೆ ಒಳಗಾಗಿಸಿದರೆ ಅವುಗಳು ಮಾಡುವ ಕಾರ್ಯಗಳೂ ಸ್ವಚ್ಛವಾಗಿಯೇ ಇರುತ್ತದೆ. ಈ ನೆಲೆಯಿಂದ ಮಾತ್ರ ಸ್ವಚ್ಛತಾ ಅಭಿಯಾನ ಯಶಸ್ಸನ್ನು ಕಾಣಲು ಸಾಧ್ಯವಿದೆ ಎಂದು ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಹೇಳಿದರು.
ಜಾಹೀರಾತು
ಪಾಣೆಮಂಗಳೂರಿನ ಎಸ್ ಎಲ್ ಎನ್ ಪಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಮಂಗಳೂರಿನ ರಾಮಕೃಷ್ಣ ಮಿಷನ್ ಹಮ್ಮಿಕೊಂಡಿದ್ದ ಸ್ವಚ್ಛತೆಗಾಗಿ ಜಾದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು. ಶಾಲಾ ಮುಖ್ಯಸ್ಥರಾದ ರಮಾ ಎಸ್.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.
ಕುದ್ರೋಳಿ ಗಣೇಶ್ ಮತ್ತು ಅವರ ತಂಡ ಜಾದುವಿನ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛ ತೆಯ ಅರಿವನ್ನು ಮೂಡಿಸಿತು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಭಾರತಿ ಸೋಮಯಾಜಿ ಅವರು ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ವಚ್ಛ ಮನಸ್ಸಿನ ಪ್ರಚೋದನೆಗೆ ಒಳಗಾಗಲಿ: ರಾಜಮಣಿ ರಾಮಕುಂಜ"
Be the first to comment on "ಸ್ವಚ್ಛ ಮನಸ್ಸಿನ ಪ್ರಚೋದನೆಗೆ ಒಳಗಾಗಲಿ: ರಾಜಮಣಿ ರಾಮಕುಂಜ"