ಬಂಟ್ವಾಳ

ದೇಶ ವಿಭಜನೆಗೆ ಕಾಂಗ್ರೆಸ್ ನೀತಿ ಕಾರಣ: ಗಿರಿಧರ ಉಪಾಧ್ಯಾಯ

ದೇಶ ವಿಭಜನೆಯಾಗಲು ಕಾಂಗ್ರೆಸ್ ನೀತಿ ಕಾರಣ, ಮತಕ್ಕಾಗಿ ಅಲ್ಪಸಂಖ್ಯಾತ ರನ್ನು ಒಲ್ಯೆಕೆ ಮಾಡಲು ಹಿಂದೂಗಳ ದಮನ ಕಾರ್ಯ ನಡೆಯುತ್ತಿದೆ ಎಂದು ಎಂದು ಬೆಂಗಳೂರು ಸಾಮಾಜಿಕ ಕಾರ್ಯಕರ್ತ ಗಿರಿಧರ ಉಪಾಧ್ಯಾಯ ಹೇಳಿದರು.

ಜಾಹೀರಾತು

ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಖಂಡ ಭಾರತ ಸಂಕಲ್ಪ  ದಿನದ ಅಂಗವಾಗಿ ಕೈಕಂಬ ಪೊಳಲಿ ದ್ವಾರದಿಂದ ಬಿಸಿರೋಡು ರಕ್ತೇಶ್ವರಿ ದೇವಿ ದೇವಸ್ಥಾನ ದ ವರೆಗೆ  ಪಂಜಿನ ಮೆರವಣಿಗೆ ಮಂಗಳವಾರ ರಾತ್ರಿ ನಡೆಯಿತು. ಬಳಿಕ ಬಿ.ಸಿ.ರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನ ದ ಬಳಿಯ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆದ ಸಂದರ್ಭ ಅವರು ಮಾತನಾಡಿದರು.

ಕಾಶ್ಮೀರ ಸಮಸ್ಯೆ ಹುಟ್ಟು ಹಾಕಲು ನೆಹರು ಅವರೇ ಕಾರಣ, ದೇಶದ ಜನಸಂಖ್ಯೆ ಹೆಚ್ಚಾದ ಸಂಸ್ಕೃತಿಯೂ ಬದಲಾಗುತ್ತೆ ಎನ್ನುವುದಕ್ಕೆ ಹಲವು ಉದಾಹರಣೆಗಳಿವೆ. ಹಿಂದೂ ಧರ್ಮದ ಮೇಲಿನ ದಾಳಿಗಳ ಕುರಿತು ಸಮಾಜ ಜಾಗೃತರಾಗಿರಬೇಕು ಎಂದರು.

ಹಿಂದೂ ಸಮಾಜ ಎಲ್ಲರ ನ್ನು ಸಮಾನವಾಗಿ ನೋಡಿದ ವಿಶಾಲ ಮನೋಭಾವ ದ ಸಮಾಜ. ಹಿಂದೂ ಧರ್ಮ ಎಲ್ಲಿಯವರೆಗೆ ಬಹುಸಂಖ್ಯಾತ ರಾಗುತ್ತದೋ ಅಲ್ಲಿಯವರೆಗೆ ಇತರರು ಆಕ್ರಮಣ ಮಾಡಲು ಸಾಧ್ಯವಿಲ್ಲ. ನಾವೆಲ್ಲಾ ಒಂದಾಗಿ ಬೇಧಬಾವ ಮರೆತು, ಭಾವನೆಗಳ ಮೂಲಕ ಹಿಂದೂ ಸಮಾಜ ದ ಪುನರುತ್ಥಾನದ ಬಗ್ಗೆ ಕೆಲಸ ಮಾಡಿದಾಗ ವಿಶ್ವಗುರು ಅಗಲು ಸಾಧ್ಯ ಎಂದ ಅವರು, ಭವ್ಯವಾದ ದೇಶ ವನ್ನು ಕಟ್ಟ ಲು ನಾವೆಲ್ಲರೂ ಒಂದಾಗೋಣ ಎಂದರು.

ಯುವ ನ್ಯಾಯವಾದಿ ರಾಜೇಶ್ ಬೊಳ್ಳುಕಲ್ಲು ಕಾರ್ಯ ಕ್ರಮದ ಅಧ್ಯಕ್ಷ ತೆ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ಅಖಂಡ ಭಾರತದ ನಿರ್ಮಾಣ ದ ಕನಸು  ಸಾಕಾರಗೊಳ್ಳಲು ಸಂಘಟನೆಯ ಪಾತ್ರ ಮುಖ್ಯವಾಗಿ ದೆ. ಹಿಂದೂ ತನವನ್ನು ಹಿಂದೂ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಸಂಘಟಿತರಾಗಿ ದೇಶದ ಉಳಿವಿಗಾಗಿ ಶ್ರಮವಹಿಸಿ ಎಂದು ಹೇಳಿದರು.

ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಹರಿಕ್ರಷ್ಣ ಬಂಟ್ವಾಳ, ಆಶೋಕ್ ಶೆಟ್ಟಿ ಸರಪಾಡಿ, ಪ್ರಮುಖರಾದ  ಹಿಂಜಾವೇ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ರವಿರಾಜ್ ಬಿಸಿರೋಡು, ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾದ್ಯಕ್ಷ  ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಘಟಕದ ಅದ್ಯಕ್ಷ ಅರುಣ್ ಕುಮಾರ್ ನುಲಿಯಾಲು ಗುತ್ತು,ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕದ ಗೌರವಾದ್ಯಕ್ಷ ವಿಠಲ ಕೋಟ್ಯಾನ್, ಹಿಂದೂ ಜಾಗರಣ  ಮಹಿಳಾ ಘಟಕದ ಅಧ್ಯಕ್ಷೆ ಬಬಿತಾ ಕೋಟ್ಯಾನ್,  ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಅಧ್ಯಕ್ಷ ಚಂದ್ರ ಕಲಾಯಿ, ಹಿಂದೂ ಜಾಗರಣ ವೇದಿಕೆ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ  ಮತ್ತಿತರರು ಉಪಸ್ಥಿತರಿದ್ದರು.

ಕಿರಣ್ ಶೆಟ್ಟಿ ಮೂರ್ಜೆ ಪ್ರತಿಜ್ಞೆ ವಿಧಿ ಬೋಧಿಸಿದರು. ಪುಪ್ಷರಾಜ್ ಕಮ್ಮಾಜೆ ಸ್ವಾಗತಿಸಿ ಸರು. ಹರ್ಷಾ ಅಮ್ಟಾಡಿ ವಂದಿಸಿದರು. ಸುರೇಶ್ ಎಸ್ ನಾವೂರ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

1 day ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago