ಬಂಟ್ವಾಳ

ಮಳೆಗೆ ಬಿಡುವು, ನೇತ್ರಾವತಿ ನೀರಿನ ಮಟ್ಟ 10.4 ಮೀಟರ್

ಸಂಜೆ 5 ಗಂಟೆ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಬಂಟ್ವಾಳದಲ್ಲಿ 10.4 ಇತ್ತು. ಬೆಳಗ್ಗಿನಿಂದ ಸುರಿಯುತ್ತಿದ್ದ ಮಳೆ ಸಂಜೆಯ ವೇಳೆಗೆ ಬಿಡುವು ಮಾಡಿಕೊಂಡಿದೆ. ಆದರೆ 10.4 ಮೀಟರ್ ಮಟ್ಟದಲ್ಲಿ ನದಿ ಕಳೆದ ನಾಲ್ಕು ದಿನಗಳಿಂದ ಹಗಲಿನ ವೇಳೆಯಲ್ಲಿ ಇರಲಿಲ್ಲ. ಹೀಗಾಗಿ ರಾತ್ರಿ ವೇಳೆ ಮತ್ತೇನಾದರೂ ಪ್ರಾಕೃತಿಕ ವೈಪರೀತ್ಯವಾದರೆ, ನದಿ ನೀರಿನಲ್ಲಿ ಏರಿಕೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಚಿತ್ರ: ಕಿಶೋರ್ ಪೆರಾಜೆ

ಈಗಾಗಲೇ ತಗ್ಗು ಪ್ರದೇಶಗಳಲ್ಲಿದ್ದವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಗಮನಾರ್ಹ ಅಂಶವೆಂದರೆ  ಯಾವಾಗಲೂ ನದಿ ನೀರು ಉಕ್ಕಿ ಹರಿಯುವ ಜಾಗಗಳಲ್ಲೇ ಈ ಬಾರಿಯೂ ನೆರೆ ಬಂದಿರುವುದು ಹೊಸದಾದ ಜಾಗವನ್ನು ಆಕ್ರಮಿಸಿಕೊಂಡದ್ದು ಕಡಿಮೆ. ಆದರೂ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡವಿನ ಬಾಗಿಲು ಕೊಪ್ಪಳ ಎಂಬಲ್ಲಿ ಎಂಟು ಮನೆಗಳ ಸುತ್ತ ನೀರು ತುಂಬಿಕೊಂಡಿದೆ.

ಜಾಹೀರಾತು

ಚಿತ್ರ: ದೀಪಕ್ ಸಾಲ್ಯಾನ್

ಮನೆಮಂದಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದು ಸ್ಥಳೀಯರ ನೆರೆವಿನೊಂದಿಗೆ ಮನೆಯಲ್ಲಿದ್ದ ವಸ್ತುಗಳನ್ನು ಬೇರೆಡೆ ಸಾಗಿಸಲಾಗಿದೆ. ಗುಲಾಬಿ, ಜಗನ್ನಾಥ ಸುಂದರ ಮೂಲ್ಯ, ಜಗನ್ನಾಥ ಹಂಝ, ವಿಶ್ವನಾಥ, ಕೇಶವ, ಅಬ್ದುಲ್ ಮುತ್ತಾಲಿಬ್ ವಸಂತ ಮೊದಲಾದವರ ಮನೆಗಳು ಜಲಾವೃತ್ತಗೊಂಡಿದೆ. ಇಲ್ಲಿನ ಅನೇಕ ಅಡಿಕೆ ತೋಟ ಹಾಗೂ ಗದ್ದೆಗಳಲ್ಲಿ ನೆರೆ ನೀರು ತುಂಬಿಕೊಂಡು ಕೃಷಿ ಹಾನಿ ಉಂಟಾಗಿದೆ. ವಿಪರೀತ ಮಳೆಯಿಂದ ಮನೆ ಕುಸಿತದಿಂದ ಕಂಗೆಟ್ಟ ಮಣಿಹಳ್ಳ ಸಮೀಪದ ಕೊಂಗ್ರಬೈಲು ನಿವಾಸಿಗಳಾದ ಅಣ್ಣುಮೂಲ್ಯ ಕುಟುಂಬ ವನ್ನು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ತನ್ನ ವಾಹನದಲ್ಲಿ ಕರೆದಂದು, ಹಳೇ ಐಬಿಯಲ್ಲಿರುವ ಗಂಜಿಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಮಧ್ಯಾಹ್ನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ ಜತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ