ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು

ಒಂದು ದಿನದ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ತಗ್ಗು ಪ್ರದೇಶಗಳಲ್ಲಿ ನದಿ ತೀರದ ರಸ್ತೆಗಳಲ್ಲಿ ನೇತ್ರಾವತಿ ನದಿ ನೀರು ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. ಗುರುವಾರ ಬೆಳಗ್ಗೆ ಎಂದಿನಂತೆಯೇ ಸಮೀಪದ ಶಾಲೆಗಳಿಗೆ ಹೊರಟ ಮಕ್ಕಳು ಮೆಟ್ಟಿಲಿಳಿಯುವ ಹೊತ್ತಿನಲ್ಲಿ ಭಾರಿ ಮಳೆ ಎದುರಾಗಿದ್ದು, ಇದೇ ಹೊತ್ತಿಗೆ ಮುಂಜಾಗರೂಕತಾ ಕ್ರಮವಾಗಿ ಶಾಲೆಗಳಿಗೆ ತಹಶೀಲ್ದಾರ್ ಪುರಂದರ ಹೆಗ್ಡೆ ರಜೆ ಘೋಷಿಸಿದ್ದಾರೆ. ಆದರೆ ಕಾಲೇಜುಗಳಿಗೆ ರಜೆ ಇದೆಯೋ ಇಲ್ಲವೋ ಎಂಬ ಗೊಂದಲದಲ್ಲಿಯೇ ಪದವಿ ವಿದ್ಯಾರ್ಥಿಗಳು ಕಾಲೇಜು ತಲುಪುತ್ತಿದ್ದಾರೆ.

Flood affected part at panemangalore aladka on 16-08-2018

ಸೋಮವಾರ, ಮಂಗಳವಾರ ಬಂಟ್ವಾಳ, ಪಾಣೆಮಂಗಳೂರಿನ ನದಿ ತೀರದ ರಸ್ತೆಗಳಿಗೆ ನುಗ್ಗಿ ಜನಜೀವನಕ್ಕೆ ತೊಂದರೆ ಉಂಟು ಮಾಡಿದ್ದ ನೇತ್ರಾವತಿ ನದಿ ನೀರು ಆಗಸ್ಟ್ 15ರಂದು ಇಳಿದಿತ್ತು. 10.4 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನದಿ ನಿನ್ನೆ 7ರಿಂದ 8 ಮೀಟರ್ ಆಸುಪಾಸಿನಲ್ಲೇ ಇತ್ತು. ಆದರೆ ಗುರುವಾರ ಬೆಳಗ್ಗೆ ಮತ್ತೆ ಏರಿಕೆ ಕಂಡಿದ್ದು, ಅಪಾಯದ ಮಟ್ಟಕ್ಕೆ (9 ಮೀಟರ್) ಬಂದಿದೆ.

ಜಾಹೀರಾತು

ಪ್ರತಿಭಾ ಕಾರಂಜಿಯ ತಾಲೂಕು ಮಟ್ಟದ ಕಾರ್ಯಕ್ರಮವೊಂದು ಸಿದ್ಧಕಟ್ಟೆಯಲ್ಲಿ ನಡೆಯಲು ಉದ್ದೇಶಿಸಲಾಗಿದ್ದು, ಮಳೆ ಇರುವ ಕಾರಣ ಇದನ್ನು ಮುಂದೂಡಬೇಕೋ ಬೇಡವೋ ಎಂಬ ಗೊಂದಲದಲ್ಲಿ ಅಧಿಕಾರಿಗಳು ಇದ್ದಾರೆ. ಮಳೆಯಿಂದಾಗಿ ವಿದ್ಯುತ್ ಪೂರೈಕೆಯೂ ಆಗಾಗ ಸ್ಥಗಿತಗೊಳ್ಳುತ್ತಿದ್ದು, ಬಂಟ್ವಾಳದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*