ಬಂಟ್ವಾಳ

ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು

ಒಂದು ದಿನದ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ತಗ್ಗು ಪ್ರದೇಶಗಳಲ್ಲಿ ನದಿ ತೀರದ ರಸ್ತೆಗಳಲ್ಲಿ ನೇತ್ರಾವತಿ ನದಿ ನೀರು ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. ಗುರುವಾರ ಬೆಳಗ್ಗೆ ಎಂದಿನಂತೆಯೇ ಸಮೀಪದ ಶಾಲೆಗಳಿಗೆ ಹೊರಟ ಮಕ್ಕಳು ಮೆಟ್ಟಿಲಿಳಿಯುವ ಹೊತ್ತಿನಲ್ಲಿ ಭಾರಿ ಮಳೆ ಎದುರಾಗಿದ್ದು, ಇದೇ ಹೊತ್ತಿಗೆ ಮುಂಜಾಗರೂಕತಾ ಕ್ರಮವಾಗಿ ಶಾಲೆಗಳಿಗೆ ತಹಶೀಲ್ದಾರ್ ಪುರಂದರ ಹೆಗ್ಡೆ ರಜೆ ಘೋಷಿಸಿದ್ದಾರೆ. ಆದರೆ ಕಾಲೇಜುಗಳಿಗೆ ರಜೆ ಇದೆಯೋ ಇಲ್ಲವೋ ಎಂಬ ಗೊಂದಲದಲ್ಲಿಯೇ ಪದವಿ ವಿದ್ಯಾರ್ಥಿಗಳು ಕಾಲೇಜು ತಲುಪುತ್ತಿದ್ದಾರೆ.

Flood affected part at panemangalore aladka on 16-08-2018

ಸೋಮವಾರ, ಮಂಗಳವಾರ ಬಂಟ್ವಾಳ, ಪಾಣೆಮಂಗಳೂರಿನ ನದಿ ತೀರದ ರಸ್ತೆಗಳಿಗೆ ನುಗ್ಗಿ ಜನಜೀವನಕ್ಕೆ ತೊಂದರೆ ಉಂಟು ಮಾಡಿದ್ದ ನೇತ್ರಾವತಿ ನದಿ ನೀರು ಆಗಸ್ಟ್ 15ರಂದು ಇಳಿದಿತ್ತು. 10.4 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನದಿ ನಿನ್ನೆ 7ರಿಂದ 8 ಮೀಟರ್ ಆಸುಪಾಸಿನಲ್ಲೇ ಇತ್ತು. ಆದರೆ ಗುರುವಾರ ಬೆಳಗ್ಗೆ ಮತ್ತೆ ಏರಿಕೆ ಕಂಡಿದ್ದು, ಅಪಾಯದ ಮಟ್ಟಕ್ಕೆ (9 ಮೀಟರ್) ಬಂದಿದೆ.

ಜಾಹೀರಾತು

ಪ್ರತಿಭಾ ಕಾರಂಜಿಯ ತಾಲೂಕು ಮಟ್ಟದ ಕಾರ್ಯಕ್ರಮವೊಂದು ಸಿದ್ಧಕಟ್ಟೆಯಲ್ಲಿ ನಡೆಯಲು ಉದ್ದೇಶಿಸಲಾಗಿದ್ದು, ಮಳೆ ಇರುವ ಕಾರಣ ಇದನ್ನು ಮುಂದೂಡಬೇಕೋ ಬೇಡವೋ ಎಂಬ ಗೊಂದಲದಲ್ಲಿ ಅಧಿಕಾರಿಗಳು ಇದ್ದಾರೆ. ಮಳೆಯಿಂದಾಗಿ ವಿದ್ಯುತ್ ಪೂರೈಕೆಯೂ ಆಗಾಗ ಸ್ಥಗಿತಗೊಳ್ಳುತ್ತಿದ್ದು, ಬಂಟ್ವಾಳದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts