ಬಂಟ್ವಾಳ

ಮಳೆ, ಪ್ರವಾಹ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ 2.5 ಕೋಟಿ ರೂ ಹಾನಿ

ಪುರಸಭೆ ವ್ಯಾಪ್ತಿಯಲ್ಲಿ ಹಾದು ಹೋಗಿರುವ ನೇತ್ರಾವತಿ ನದಿಯಲ್ಲಿ ಕಳೆದ ವಾರ ಸುರಿದ ಮಳೆ, ಪ್ರವಾಹದಿಂದಾಗಿ ಸುಮಾರು 2.5 ಕೋಟಿ ರೂಗಳಷ್ಟು ಹಾನಿ ಸಂಭವಿಸಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ನಂದರಬೆಟ್ಟು ಪ್ರದೇಶದಲ್ಲಿ ನೆರೆಯಿಂದ ಮುಳುಗಡೆಗೀಡಾಗಿದ್ದ 19 ಮನೆಗಳ ಜನರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳ ತಂಡದ ಸಹಾಯದಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾದ ಸಂದರ್ಭ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ನೇತೃತ್ವ ವಹಿಸಿದ್ದರು.

ಈ ಭಾಗದಲ್ಲಿ ಗರಿಷ್ಟ ಸಂಖ್ಯೆಯಲ್ಲಿ ಮನೆ ಮತ್ತು ಅಂಗಡಿಗಳಿಗೆ ನೆರೆಎ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇಲ್ಲಿನ ಬಹುತೇಕ ರಸ್ತೆಗಳಿಗೆ ನೆರೆ ನೀರು ನುಗ್ಗಿದ ಪರಿಣಾಮ ರಸ್ತೆ ಮಾತ್ರವಲ್ಲದೆ ಕುಡಿಯುವ ನೀರು, ಕಾಲು ಸಂಕ, ತಡೆಗೋಡೆ, ಮನೆ ಮತ್ತು ಆವರಣಗೋಡೆ ಹೀಗೆ ಒಟ್ಟು ರೂ ೨.೫ಕೋಟಿ ಮೊತ್ತದ ನಷ್ಟ ಸಂಭವಿಸಿದೆ ಎಂದು ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ತಿಳಿಸಿದ್ದಾರೆ.

ಜಾಹೀರಾತು

ಇಲ್ಲಿನ ಬಿ.ಮೂಡ ಗ್ರಾಮದ ಗೂಡಿನಬಳಿ, ತಲಪಾಡಿ, ನಂದರಬೆಟ್ಟು, ಬಿ.ಕಸ್ಬಾ ಗ್ರಾಮದ ಬಡ್ಡಕಟ್ಟೆ, ಬಸ್ತಿಪಡ್ಪು, ಜಕ್ರಿಬೆಟ್ಟು, ಪಾಣೆಮಂಗಳೂರು ಫಿರ್ಕಾ ವ್ಯಾಪ್ತಿಯ ಆಲಡ್ಕ, ಬಂಗ್ಲೆಗುಡ್ಡೆ, ಅಕ್ಕರಂಗಡಿ, ಬೋಗೋಡಿ, ಜೈನರಪೇಟೆ ಮತ್ತಿತರ ಕಡೆಗಳಲ್ಲಿ ನೆರೆ ನೀರು ನುಗ್ಗಿದೆ. ಈ ಪೈಕಿ ನಂದರಬೆಟ್ಟು ಎಂಬಲ್ಲಿ ಒಟ್ಟು ೧೯ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಅಲ್ಲಿನ ಸುಮಾರು 250 ಮಂದಿಗೆ ಸ್ಥಳೀಯ ಖಾಲಿ ಮನೆಯೊಂದರಲ್ಲಿ ಗಂಜಿ ಕೇಂದ್ರ ತೆರೆಯಲಾಗಿತ್ತು. ಉಳಿದಂತೆ ತಲಪಾಡಿ ಮತ್ತು ಬಂಟ್ವಾಳ ನಿರೀಕ್ಷಣಾ ಮಂದಿರಲ್ಲಿ ತೆರೆಯಲಾಗದ ಗಂಜಿ ಕೇಂದ್ರಗಳಿಗೆ ಊಟ ಮತ್ತು ಉಪಹಾರ ಒದಗಿಸಿದೆ. ನಂದರಬೆಟ್ಟು ಪ್ರದೇಶದಲ್ಲಿ ಅಂದು ರಾತ್ರಿ ಧ್ವನಿವರ್ಧಕ ಮೂಲಕ ನಾಗರಿಕರನ್ನು ಎಚ್ಚರಿಸಲಾಗಿದ್ದು, ನಗರ ಠಾಣಾಧಿಕಾರಿ ಚಂದ್ರಶೇಖರ್ ಮತ್ತು ಅಗ್ನಿಶಾಮಕ ದಳ ಸಹಾಯಕ ಠಾಣಾಧಿಕಾರಿ ರಾಜೀವ್ ನೇತೃತ್ವದ ತಂಡವು ದೋಣಿ ಧಾವಿಸಿ ಬಂದು ಸ್ಥಳೀಯರ ಸಹಕಾರ ಪಡೆದು ವೇಳೆ ಕಾರ್ಯಾಚರಣೆ ನಡೆಸುವಲ್ಲಿ ಯಶಸ್ವಿಯಾಗಿದೆ. ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಹಾಯಕ ಎಂಜಿನಿಯರ್ ಇಕ್ಬಾಲ್ ಮತ್ತಿತರರು ಪಾಲ್ಗೊಂಡಿದ್ದರು ಎಂದು ಅವರು ವಿವರಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

17 hours ago