ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ

ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆ ಸೋಮವಾರ ಸಂಜೆ ನಡೆಯಿತು.

ಜಾಹೀರಾತು

ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ , ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಹಿರಿಯ ಸಹಕಾರಿ ಧುರೀಣ ಬಿ.ಟಿ.ನಾರಾಯಣ ಭಟ್ , ಬಿಜೆಪಿ ನಾಯಕರಾದ ಜಿ.ಆನಂದ, ದೇವದಾಸ ಶೆಟ್ಟಿ, ಸುಲೋಚನಾ ಭಟ್, ಕೆ. ಸುಗುಣ ಕಿಣಿ, ವಜ್ರನಾಥ ಕಲ್ಲಡ್ಕ, ಮತ್ತಿತರರು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿದರು. ಪಕ್ಷದ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಕಾರ್ಯಕ್ರಮವನ್ನು ನಿರ್ವಹಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ನನ್ನ ರಾಜಕೀಯ ಕ್ಷೇತ್ರದ ಪ್ರವೇಶಕ್ಕೆ ಅಟಲ್‌ಜೀಯಂತಹ ಮಹಾನ್ ನಾಯಕರು ಪ್ರೇರಣೆಯಾಗಿದ್ದು ಅಟಲ್ ಜೀಗೆ ಅಟಲ್ ಜೀಯವರೆ ಸಾಟಿ ಎಂದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಮ್ಮನ್ನಗಲಿದರೂ ಅವರ ನೆನಪು, ಅವರು ಹಾಕಿಕೊಟ್ಟ ದಾರಿ ಅಜರಾಮರ ಎಂದು ಉಳಿಪ್ಪಾಡಿ ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ ವಾಜಪೇಯಿಯವರು ವಿಶ್ವನಾಯಕ. ಮನುಷ್ಯ ಬದುಕಿರುವಾಗ ಸಾಯಬಾರದು, ಸತ್ತ ಮೇಲೆಯೂ ಬದುಕಿರ ಬೇಕು ಎನ್ನುವ ರೀತಿಯ ಆದರ್ಶ ಜೀವನ ನಡೆಸಿದವರು, ಆಧ್ಯಾತ್ಮ ಹಿನ್ನೆಲೆಯನ್ನು ಮೈಗೂಡಿಸಿಕೊಂಡ ವಾಜಪೇಯಿ ನಿಜ ಅರ್ಥದ ಅಜಾತಶತ್ರು ಎಂದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ ಮಾತನಾಡಿ ವಾಜಪೇಯಿ ಅಗಲುವಿಕೆ ನಿರ್ವಾತವನ್ನು ನಿರ್ಮಿಸಿದೆ. 15 ವರ್ಷ ಸಕ್ರಿಯ ರಾಜಕಾರಣದಲ್ಲಿ ಅವರು ಇಲ್ಲದಿದ್ದರೂ ಕೂಡ ದೇಶದ ಜನತೆ ಅವರ ನಿಧಾನಕ್ಕೆ ಸ್ಪಂದಿಸಿದ ರೀತಿ ಅವರ ಮೇಲೆ ಇದ್ದ ಗೌರವವನ್ನು ಪ್ರತಿ ಬಿಂಬಿಸುತ್ತದೆ ಎಂದರು. ಜಾತಿ, ಪಂಥ, ಪಕ್ಷವನ್ನು ಮೀರಿ ವಿಶ್ವ ಭ್ರಾತೃತ್ವವನ್ನು ಸಾರಿದ ನಾಯಕರಾಗಿದ್ದ ವಾಜಪೇಯಿ ಅಧಿಕಾರಕ್ಕಿಂತ ಪ್ರಜಾಪ್ರಭುತ್ವದ ಮೌಲ್ಯವೇ ಶ್ರೇಷ್ಠ ಎಂದು ತೋರಿಸಿಕೊಟ್ಟವರು, ಸಾಂಸ್ಕೃತಿಕ ರಾಷ್ಟ್ರವಾದದ ಚಿಂತನೆಯೊಂದದಿಗೆ ಮುನ್ನಡೆದವರು ಎಂದರು. ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಹಿರಿಯ ಸಹಕಾರಿ ಧುರೀಣ ಬಿ.ಟಿ.ನಾರಾಯಣ ಭಟ್ ವಾಜಪೇಯಿವವರೊಂದಿಗಿನ ಒಡನಾಟವನ್ನು ಸ್ಮರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

13 hours ago