ಬಂಟ್ವಾಳ

ಅರಣ್ಯ ರಕ್ಷಣೆ ವಿಚಾರ ಪಠ್ಯದಲ್ಲಷ್ಟೇ ಅಲ್ಲ ಆಚರಣೆಯೂ ಆಗಲಿ: ವಲಯ ಅರಣ್ಯಾಧಿಕಾರಿ

ಪಠ್ಯದಲ್ಲಿರುವ ಅರಣ್ಯ ರಕ್ಷಣೆಯ ವಿಚಾರವನ್ನು ನೈಜತೆಗೆ ತರುವ ನಿಟ್ಟಿನಲ್ಲಿ ಹಸಿರು ಕರ್ನಾಟಕ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಮಾಲಿನ್ಯ ನಡೆಯುತ್ತಿರುವುದು ಎಚ್ಚರಿಕೆಯ ಕರೆಗಂಟೆಯಾಗಿದೆ. ಪೂರ್ವಿಕರಿಂದ ಬಂದ ಅರಣ್ಯ ಎಂಬ ಬಳುವಳಿಯನ್ನು ಮುಂದಿನ ಜನಾಂಗಕ್ಕೆ ನೀಡಬೇಕು ಎಂದು ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ವೀರಕಂಬ ಸಿರಿಚಂದನ ವನದಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಮತ್ತು ವೀರಕಂಬ ಗ್ರಾಮ ಅರಣ್ಯ ಸಮಿತಿ ಇವರ ಸಹಭಾಗಿತ್ವದಲ್ಲಿ ನಡೆದ ಹಸಿರು ಕರ್ನಾಟಕ -೨೦೧೮ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ತಾಲೂಕಿನ ಮೊತ್ತಮೊದಲ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಸಹಯೋಗದೊಂದಿಗೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಮೊದಲ ಕಾರ್ಯವಾಗಿ ನಡೆಯಿತು. ಈ ಕಾರ್‍ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆ, ಅರಣ್ಯದಿಂದಾಗುವ ಲಾಭಗಳು ಹಾಗೆಯೇ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆದುಕೊಳ್ಳುವುದು ಹೇಗೆ ಎಂಬ ವಿಚಾರದ ಕುರಿತು ಮಾಹಿತಿ ನೀಡಿದರು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಮರಗಳ ಬೀಜ ವಿತರಣೆ ಮಾಡಿದರು. ಸಿರಿ ಚಂದನ ವನದಲ್ಲಿ ವಿದ್ಯಾರ್ಥಿಗಳಿಂದ ಅರಣ್ಯ ವೀಕ್ಷಣೆ ಜತೆ ಬೇರೆ ಬೇರೆ ವಿಧದ ಮರಗಳ ಬೀಜಬಿತ್ತನೆ ನಡೆಯಿತು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಬಂಟ್ವಾಳ ವಲಯ ಉಪ ಅರಣ್ಯಾಧಿಕಾರಿ ಯಶೋಧರ, ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಉಪಪ್ರಾಂಶುಪಾಲೆ ಡಾ. ಸುಜಾತ ಹೆಚ್ ಆರ್., ವೀರಕಂಬ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ದೀಲಿಪ್ ಕುಮಾರ್ ಶೆಟ್ಟಿ, ಬಂಟ್ವಾಳ ವಲಯ ಅರಣ್ಯ ರಕ್ಷಕರಾದ ದಯಾನಂದ, ಜಿತೇಶ್, ವಿಜ್ಞಾನ ವಿಭಾಗದ ಹಿರಿಯ ಉಪನ್ಯಾಸಕಿ ಭಾರತೀ ಭಟ್, ಎನ್‌ಸಿಸಿ ಘಟಕದ ಅಧಿಕಾರಿ ಲೆ. ಸುಂದರ್, ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಕಿಟ್ಟು ರಾಮಕುಂಜ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ವಿಜ್ಞಾನ ವಿಭಾಗ, ಎನ್‌ಸಿಸಿ ಘಟಕ, ಮತ್ತು ಎನ್‌ಎಸ್‌ಎಸ್ ಘಟಕದ ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳು, ಸುಮಾರು ಕಾಲೇಜಿನ 20 ಉಪನ್ಯಾಸಕರು ಭಾಗವಹಿಸಿದರು.

ಜಾಹೀರಾತು

ವಿದ್ಯಾರ್ಥಿನಿ ಪ್ರಿಯಾಂಕ ಪೈ ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಡಾ| ಮಂಜುನಾಥ ಉಡುಪ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮತ್ತು ಕಾರ್‍ಯಕ್ರಮ ಸಂಯೋಜಕ ಪ್ರದೀಪ್ ಪೂಜಾರಿ ವಂದಿಸಿ, ಕನ್ನಡ ಉಪನ್ಯಾಸಕ ಮತ್ತು ಕಾರ್‍ಯಕ್ರಮ ಸಂಯೋಜಕ ಚೇತನ್ ಮುಂಡಾಜೆ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ