ಬಂಟ್ವಾಳ ತಾಲೂಕಿನ ವಿವಿಧೆಡೆ ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದವರಿಗೆ ಪರಿಹಾರಧನವನ್ನು ಸೋಮವಾರ ವಿತರಿಸಲಾಯಿತು.
ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ಮನೆಗೆ ನುಗ್ಗಿ ನಷ್ಟ ಸಂಭವಿಸಿದ ಮನೆಯವರಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ತಾಲೂಕು ಕಚೇರಿಯಲ್ಲಿ ಚೆಕ್ ವಿತರಣೆ ಮಾಡಿದರು. ಈ ಸಂದರ್ಭ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಪ್ರಕೃತಿ ವಿಕೋಪ ವಿಷಯ ನಿರ್ವಾಹಕ ವಿಷು ಕುಮಾರ್ಗ್ರಾಮ ಲೆಕ್ಕಾಧಿಕಾರಿ ಗಳಾದ ಶಿವಾನಂದ ನಾಟೇಕಾರ್, ಕುಮಾರ್ ಟಿ ಸಿ, ರಾಜು ಲಂಬಾನಿ, ವಿಜೇತ, ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಯಶೋಧಾ ಮತ್ತಿತರರು ಹಾಜರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)