ಸಾಗುವಾನಿ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಗರಂಗಡಿ ಎಂಬಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಜಾಹೀರಾತು
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಗರಂಗಡಿ ಎಂಬಲ್ಲಿ ಸಾರ್ವಜನಿಕ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಅರಣ್ಯ ಇಲಾಖೆ ಯ ಅಧಿಕಾರಿಗಳು 12 ಲಕ್ಷ ರೂ ಮೌಲ್ಯದ ಲಾರಿ ಸಹಿತ ಸಾಗುವಾನಿ ಮರಗಳನ್ನು ವಶಕ್ಕೆ ಪಡೆದುಕೊಂಡರು. ಈ ಸಂದರ್ಭ ಆರೋಪಿ ಲಾರಿ ಚಾಲಕ ಪೈಜಲ್ ಎಂಬಾತನನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಗೊಳಿಸಲಾಗಿದೆ. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಅವರ ಮಾರ್ಗದರ್ಶನ ದಲ್ಲಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕೆ, ಮನೋಜ್, ಲಕ್ಮೀನಾರಾಯಣ , ಸ್ಮಿತಾ, ಚಾಲಕ ಜಯರಾಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಾಗುವಾನಿ ಮರ ಅಕ್ರಮ ಸಾಗಾಟ ಪತ್ತೆ"
Be the first to comment on "ಸಾಗುವಾನಿ ಮರ ಅಕ್ರಮ ಸಾಗಾಟ ಪತ್ತೆ"