ರಸ್ತೆ ಬದಿಯಲ್ಲಿದ್ದ ಯುಕನೋರ್ವನಿಗೆ ಬಸ್ವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಇಲ್ಲಿನ ನಿವಾಸಿ ನವಾಝ್ (19) ಮೃತಪಟ್ಟ ಯುವಕ. ಅವರು ರಸ್ತೆಯ ಬದಿಯಲ್ಲಿ ಮನೆ ಕಡೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ರು ತಿಳಿಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…