ಬಂಟ್ವಾಳ

ಜೋಡುಮಾರ್ಗ ಜೇಸಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಟೀಮ್ ವರ್ಕ್ ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮ ಜೋಡುಮಾರ್ಗ ಜೇಸಿಯ ವತಿಯಿಂದ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ವಲಯ ತರಬೇತುದಾರ, ಜೇಸಿ ಮಂಗಳೂರು ಸಾಮ್ರಾಟ್ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ತರಬೇತಿ ನಡೆಸಿಕೊಟ್ಟರು. ಜೋಡುಮಾರ್ಗ ನೇತ್ರಾವತಿಯ ಪೂರ್ವಾಧ್ಯಕ್ಷರುಗಳಾದ ವೃಷಭ್ ರಾಜ್ ಜೈನ್, ಬಿ ರಾಮಚಂದ್ರ ರಾವ್, ಜಯಾನಂದ ಪೆರಾಜೆ, ಅಹಮ್ಮದ್ ಮುಸ್ತಾಫ, ನವೀನ್ ಚಂದ್ರ ಶೆಟ್ಟಿ ಮುಂಡಾಜೆ, ಉಮೇಶ್ ನಿರ್ಮಲ್, ಕೃಷ್ಣ ರಾಜ್ ಭಟ್, ವಸಂತ್ ಪಿ, ಸತ್ಯನಾರಾಯಣ ರಾವ್ ಉಪಸ್ಥಿತರಿದ್ದರು.

ಜೇಸಿ ಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷ ರಾದ ಸವಿತಾ ನಿರ್ಮಲ್ ಸ್ವಾಗತಿಸಿದರು. ರವೀಂದ್ರ ಕುಕ್ಕಾಜೆ ತರಬೇತುದಾರರನ್ನು ಸಭೆಗೆ ಪರಿಚಯಿಸಿದರು. ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಯುವ ಜೇಸಿ ವಿಭಾಗದ ಅಧ್ಯಕ್ಷೆ ದಿವ್ಯಾ ಉಪಸ್ತಿತರಿದ್ದರು. ತರಬೇತಿಯ ಬಗ್ಗೆ ಅಹಮ್ಮದ್ ಮುಸ್ತಾಫ ಹಾಗೂ ಹರಿಪ್ರಸಾದ್ ಕುಲಾಲ್ ಅನಿಸಿಕೆ ಹಂಚಿಕೊಂಡರು. ಕಾರ್ಯದರ್ಶಿ ಹರ್ಷರಾಜ್ ಧನ್ಯವಾದ ಸಮರ್ಪಣೆ ಮಾಡಿದರು. ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜೇಸಿ ಸದಸ್ಯ ಹರೀಶ ಮಾಂಬಾಡಿ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.