ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಕಾವಳಕಟ್ಟೆ-ಬೆಂಗತ್ತೋಡಿ ರಸ್ತೆ ಹಾನಿಯಾಗಿದ್ದು, ದುರಸ್ತಿಗೆ ಸ್ಥಳೀಯರು ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.
ಅವರು ನೀಡಿದ ಪತ್ರದ ಪೂರ್ಣಪಾಠ ಹೀಗಿದೆ:
ಜಾಹೀರಾತು
ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಕಾವಳಕಟ್ಟೆ-ಬೆಂಗತ್ತೋಡಿ ರಸ್ತೆ ಹಾನಿಯಾಗಿದ್ದು, ಮೊನ್ನೆ ಸುರಿದ ಭಾರೀ ಮಳೆಯಿಂದಾಗಿ ಭಾಗಶಃ ಹಾನಿಗೊಂಡಿರುತ್ತದೆ. ಕಳೆದ ಸುಮಾರು 15 ವರ್ಷಗಳಿಂದ ಈ ರಸ್ತೆಯ ನಿರ್ವಹಣೆ ಸಮರ್ಪಕವಾಗಿ ನಡೆದಿರುವುದಿಲ್ಲ.
ಇದೀಗ ರಸ್ತೆಯು ಸಂಪೂರ್ಣವಾಗಿ ಹಾನಿಗೊಂಡಿದ್ದು, ವಾಹನ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿರುವುದಾಗಿದೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು, ರಸ್ತೆಯ ಸಂಚಾರ ಅಗತ್ಯವಾಗಿರುತ್ತದೆ.
ರಸ್ತೆ ಹಾನಿಗೊಂಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ನಿತ್ಯವೂ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾಥರ್ಿಗಳು ಅದರಲ್ಲೂ ಮುಖ್ಯವಾಗಿ ಹೆಣ್ಮಕ್ಕಳಿಗೆ ಬಹಳಷ್ಟು ಕಷ್ಟಕರವಾಗಿರುತ್ತದೆ. ರಸ್ತೆ ಹಾನಿಗೊಂಡಿರುವುದರಿಂದ ನಿತ್ಯವೂ ಎದುರಾಗುತ್ತಿರುವ ಸಮಸ್ಯೆಗಳಿಗೆ ತಾವುಗಳು ವೈಯಕ್ತಿಕ ಗಮನ ಹರಿಸಿ, ರಸ್ತೆ ದುರಸ್ತಿ, ಡಾಮಾರೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಂಬಂಧಿತ ಇಲಾಖೆಗೆ ಮನವಿ ಮಾಡುತ್ತಿದ್ದೇವೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಾವಳಕಟ್ಟೆ – ಬೆಂಗತ್ತೋಡಿ ರಸ್ತೆ ಹಾನಿ, ದುರಸ್ತಿಗೆ ಮನವಿ"
Be the first to comment on "ಕಾವಳಕಟ್ಟೆ – ಬೆಂಗತ್ತೋಡಿ ರಸ್ತೆ ಹಾನಿ, ದುರಸ್ತಿಗೆ ಮನವಿ"