ನಿಮ್ಮ ಧ್ವನಿ

ಕಾವಳಕಟ್ಟೆ – ಬೆಂಗತ್ತೋಡಿ ರಸ್ತೆ ಹಾನಿ, ದುರಸ್ತಿಗೆ ಮನವಿ

ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಕಾವಳಕಟ್ಟೆ-ಬೆಂಗತ್ತೋಡಿ ರಸ್ತೆ ಹಾನಿಯಾಗಿದ್ದು, ದುರಸ್ತಿಗೆ ಸ್ಥಳೀಯರು ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.

ಅವರು ನೀಡಿದ ಪತ್ರದ ಪೂರ್ಣಪಾಠ ಹೀಗಿದೆ:

ಜಾಹೀರಾತು

ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಕಾವಳಕಟ್ಟೆ-ಬೆಂಗತ್ತೋಡಿ ರಸ್ತೆ ಹಾನಿಯಾಗಿದ್ದು, ಮೊನ್ನೆ ಸುರಿದ ಭಾರೀ ಮಳೆಯಿಂದಾಗಿ ಭಾಗಶಃ ಹಾನಿಗೊಂಡಿರುತ್ತದೆ. ಕಳೆದ ಸುಮಾರು 15 ವರ್ಷಗಳಿಂದ ಈ ರಸ್ತೆಯ ನಿರ್ವಹಣೆ ಸಮರ್ಪಕವಾಗಿ ನಡೆದಿರುವುದಿಲ್ಲ.

ಇದೀಗ ರಸ್ತೆಯು ಸಂಪೂರ್ಣವಾಗಿ ಹಾನಿಗೊಂಡಿದ್ದು, ವಾಹನ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿರುವುದಾಗಿದೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು, ರಸ್ತೆಯ ಸಂಚಾರ ಅಗತ್ಯವಾಗಿರುತ್ತದೆ.

ರಸ್ತೆ ಹಾನಿಗೊಂಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ನಿತ್ಯವೂ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾಥರ್ಿಗಳು ಅದರಲ್ಲೂ ಮುಖ್ಯವಾಗಿ ಹೆಣ್ಮಕ್ಕಳಿಗೆ ಬಹಳಷ್ಟು ಕಷ್ಟಕರವಾಗಿರುತ್ತದೆ. ರಸ್ತೆ ಹಾನಿಗೊಂಡಿರುವುದರಿಂದ ನಿತ್ಯವೂ ಎದುರಾಗುತ್ತಿರುವ ಸಮಸ್ಯೆಗಳಿಗೆ ತಾವುಗಳು ವೈಯಕ್ತಿಕ ಗಮನ ಹರಿಸಿ, ರಸ್ತೆ ದುರಸ್ತಿ, ಡಾಮಾರೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಂಬಂಧಿತ ಇಲಾಖೆಗೆ ಮನವಿ ಮಾಡುತ್ತಿದ್ದೇವೆ.

ಜಾಹೀರಾತು
  • ಸ್ಥಳೀಯ ಸಾರ್ವಜನಿಕರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ