ಚಾಲಕ ವರ್ಗಾವಣೆ ವಿಚಾರ – ನ್ಯಾಯಪರವಾಗಿ ಕೆಲಸ ನಿರ್ವಹಿಸಲು ರೈ ಮನವಿ

ಚಾಲಕನ ವರ್ಗಾವಣೆಯ ವಿಚಾರವಾಗಿ ಬಂಟ್ವಾಳ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ನಡೆಸಿದ ಧರಣಿಗೆ ಪ್ರತಿಯಾಗಿ ಮಾಜಿ ಸಚಿವ ಬಿ. ರಮನಾಥ ರೈ ನೇತೃತ್ವದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಿಯೋಗ ಸೋಮವಾರ ಸಂಜೆ ತಾಲೂಕು ಪಂಚಾಯಿತಿ ಕಚೇರಿಗೆ ತೆರಳಿತು.
ಜನಪ್ರತಿನಿಗಳ ಒತ್ತಡಕ್ಕ ಸಿಲುಕದೆ ನ್ಯಾಯಪರವಾಗಿ ಕೆಲಸ ಮಾಡಿ, ಪ್ರತಿಭಟನೆಗೆ ಹೆದರಿ ಕೆಲಸ ಮಾಡಬೇಡಿ ಎಂದು ಅಧಿಕಾರಿಗಳಲ್ಲಿ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಸಣ್ಣ ವಿಚಾರವೊಂದನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಚಾಲಕನ ವರ್ಗಾವಣೆ ವಿಚಾರವಾಗಿ ಲೋಪವಾಗಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡಬೇಕಿತ್ತು. ಅದರ ಬದಲು ಪ್ರತಿಭಟನೆ ಮಾಡಲಾಗಿದೆ. ಅಧಿಕಾರಿಗಳನ್ನು ಹೆದರಿಸಲು ನಾವು ಅವಕಾಶ ಕೊಡುವುದಿಲ್ಲ. ನ್ಯಾಯಪರವಾಗಿ ಕೆಲಸ ಮಾಡಿ, ಪ್ರತಿಭಟನೆಗೆ ಹೆದರಿ ಕೆಲಸ ಮಾಡಬೇಡಿ ಎಂದು ಹೇಳಿದ್ದಾಗಿ ರೈ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್. ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾವೆ, ಬೇಬಿ ಕುಂದರ್, ಮಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ ಮತ್ತಿತರ ನಾಯಕರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚಾಲಕ ವರ್ಗಾವಣೆ ವಿಚಾರ – ನ್ಯಾಯಪರವಾಗಿ ಕೆಲಸ ನಿರ್ವಹಿಸಲು ರೈ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*