ಬಂಟ್ವಾಳ

ಮನೆ ಮಾಲೀಕಗೆ ಹಲ್ಲೆಗೈದು ಚಿನ್ನ ದೋಚಿದ ಆರೋಪಿ ಬಂಧನ

ಬಿ.ಸಿ.ರೋಡಿನ ಮೊಡಂಕಾಪುವಿನಲ್ಲಿ ಮನೆ ಮಾಲೀಕನಿಗೆ ಹಲ್ಲೆಗೈದು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು  ಬಂಧಿಸಿದ್ದಾರೆ.

ಮನೆ ಬಾಗಿಲು ಬಡಿದು ಹಲ್ಲೆ ನಡೆಸಿ ಬಂಗಾರದ ಸರ ಕದ್ದೊಯ್ದ ಅಪರಿಚಿತರು

ಜಾಹೀರಾತು

ಶಿವಮೊಗ್ಗ ಜಿಲ್ಲೆಯ ಕನಕಬೇಳೂರು ನಿವಾಸಿ ಪ್ರವೀಣ್ ಕೆ ( 31) ಬಂಧಿತ ಆರೋಪಿ.

ಅಗಸ್ಟ್ 8 ರಂದು ರಾತ್ರಿ ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ನಿವಾಸಿ ಜನಾರ್ದನ ಹೊಳ್ಳ ಅವರ ಮನೆ ಬಾಗಿಲು ತಟ್ಟಿದ ಹಿನ್ನಲೆಯಲ್ಲಿ ಬಾಗಿಲು ತೆರೆಯುತ್ತಿದ್ದಂತೆ ಅವರ ತಲೆಗೆ ಬಡಿದು ಅವರ ಕತ್ತಿನಲ್ಲಿದ್ದ 75 ಸಾ.ರೂ.ಮೌಲ್ಯದ ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದರು.

ಜಾಹೀರಾತು

ಬಂಧಿತನಾಗಿರುವ ಆರೋಪಿ ಪ್ರವೀಣ್ ನ ವಿರುದ್ದ ಬೆಂಗಳೂರು ಉಪ್ಪಾರಪೇಟೆ ಠಾಣೆಯಲ್ಲಿ ಮೂರು ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಎಸ್.ಪಿ.ರವಿಕಾಂತೇ ಗೌಡ, ಅಡಿಷನಲ್ ಎಸ್.ಪಿ.ಸಜಿತ್ ನಿರ್ದೇಶನ ದಲ್ಲಿ, ಬಂಟ್ವಾಳ ಎ.ಎಸ್.ಪಿ.ಹ್ರಷಿಕೇಶ್ ಸೋನಾವಣೆ ಅವರ ಮಾರ್ಗದರ್ಶನ ದಲ್ಲಿ, ಬಂಟ್ವಾಳ ವ್ರತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ವಾಳ ಎಸ್.ಐ.ಚಂದ್ರಶೇಖರ್, ಅಪರಾಧ ವಿಭಾಗದ ಎಸ್.ಐ.ಹರೀಶ್ ಮತ್ತವರ ತಂಡ ಆರೋಪಿಯನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಇನ್ನೊರ್ವ ಆರೋಪಿ ತಲೆ ಮರೆಸಿದ್ದು ,ಅತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ