ಬಂಟ್ವಾಳ

ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಾಲಿಕ

ಶೋಷಿತಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಾಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಸಂತನಾಗಿ ಉಳಿಯದೆ ದೇಶ ಸೇವೆಯೇ ಈಶ ಸೇವೆನ್ನುವಕಲ್ಪನೆಯನ್ನಿಟ್ಟುಕೊಂಡುತನ್ನಜೀವನವನ್ನು ಶೋಷಿತರ ಉದ್ದಾರಕ್ಕಾಗಿಯೇ ಮೀಸಲಿಟ್ಟವರು. ದೇವಸ್ಥಾನ ನಿರ್ಮಾಣ ಮಾಡಿ ಜನರ ಬಳಿಗೆ ದೇವರನ್ನುಕರೆತಂದವರು, ಕೆಳವರ್ಗದ ಜನರಲ್ಲಿದ್ದ ಮೌಢ್ಯಗಳನ್ನು ದೂರ ಮಾಡಿ ಜ್ಞಾನದ ಬೆಳಕನ್ನು ನೀಡಿದವರು.ಆದರೆ ಬೇರೆ ಬೇರೆ ಕಾರಣಗಳಿಗೆ ಜಾತಿ, ಧರ್ಮ, ದೇವರ ಹೆಸರಿನಲ್ಲಿ ಇಂದಿಗೂ ಅಸಮಾನತೆಗಳು ಕಾಣುತ್ತಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದು ಭೋದಿಸಿದ ಸಂದೇಶ ಈ ಕಾಲಘಟಕ್ಕೂ ಪ್ರಸ್ತುತ ಎಂದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು.

ಯುವವಾಹಿನಿ ಬಂಟ್ವಾಳ ಘಟಕದ ಸಲಹೆಗಾರರು ಬಿ.ತಮ್ಮಯ, ಅಣ್ಣು ಪೂಜಾರಿ, ನಾರಾಯಣಗುರು ತತ್ವಪ್ರಚಾರ ಅನುಷ್ಟಾನ ನಿರ್ದೇಶಕ ದಯಾನಂದ ತುಂಬೆ, ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲಾ ಶಿಕ್ಕಕಿಯರಾದ ಸವಿತಾ, ಚೇತನಾ, ಯುವವಾಹಿನಿಯ ಮಾಜಿ ಅಧ್ಯಕ್ಷರಾದ ರಾಮಚಂದ್ರ ಸುವರ್ಣ, ಕಾರ್ಯದರ್ಶಿ ಕಿರಣ್‌ರಾಜ್, ಕೋಶಾಧಿಕಾರಿ ಗಣೇಶ್ ಮಣಿ, ಲೋಕೇಶ್ ಸುವರ್ಣ ಅಲೆತ್ತೂರು, ಗಣೇಶ್ ಪೂಂಜರೆಕೋಡಿ, ಲೋಕೇಶ್ ಪಿ.ಜೆ, ಪ್ರವೀಣ್ ತುಂಬೆ, ಮಲ್ಲಿಕಾ ಪಚ್ಚಿನಡ್ಕ, ಭವಾನಿ ಅಮೀನ್ , ನಾರಾಯಣ ಅಮೀನ್, ಶ್ರೀಧರ ಪೂಜಾರಿ, ಯೋಗೀಶ್ ಕಲ್ಲಡ್ಕ, ರಚನಾ, ನಾಗೇಶ್ ಏಲಾಬೆ, ಹರೀಶ್ ಕುದನೆ, ನಾಗೇಶ್ ನೈಬೇಲು, ಸುನಿಲ್ ಮರ್ದೋಳಿ ಮತ್ತಿತರರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ. ಸ್ವಾಗತಿಸಿದರು, ಉಪಾಧ್ಯಕ್ಷ ನಾಗೇಶ್ ಎಂ ವಂದಿಸಿದರು, ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

10 hours ago