ಬಂಟ್ವಾಳ

ಬೆಳೆ ನಾಶವಾದರೆ ಪ್ರಕೃತಿ ವಿಕೋಪದಡಿ ಪರಿಹಾರ: ಸಿಎಂ ಸ್ಪಂದನೆ – ಶಾಸಕ ರಾಜೇಶ್ ನಾಯ್ಕ್

ದ.ಕ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಅಡಿಕೆ ಬೆಳೆ ನಾಶವಾಗಿರುವ ಕುರಿತು ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರ ಧನ ನೀಡುವಂತೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಮೂಲಕ ಒತ್ತಾಯ ಮಾಡಲಾಗಿದೆ. ನಷ್ಟದ ಬಗ್ಗೆ ಸೂಕ್ತ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ಬೆಳೆಯಾದ ಅಡಿಕೆ ಕೃಷಿಯು ಕೊಳೆ ರೋಗ ಪೀಡಿತವಾಗಿದೆ. ಇದರಿಂದ ಅಡಿಕೆ ಬೆಳೆಯು ಹಂತ ಹಂತವಾಗಿ ನಾಶವಾಗಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಬಗ್ಗೆ ಸೂಕ್ತ ಪರಿಹಾರ ಒದಗಿಸುವಂತೆ, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿ ಅವರನ್ನು ಖುದ್ದು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದರು.
ಅಡಿಕೆ ಬೆಳೆ ನಾಶವಾಗಿರುವ ಕುರಿತು ತೋಟಗಾರಿಕಾ ಇಲಾಖೆಯಿಂದ ಸಮೀಕ್ಷೆ ಮಾಡಲು ರಾಜ್ಯ ಸರಕಾರವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಎರಡು ತಂಡವನ್ನು ರಚನೆ ಮಾಡಿದೆ. ಸರ್ವೇ ಮಾಡಲು ಸೆ. 10 ಕೊನೆಯ ದಿನವಾಗಿದ್ದು, ಇದರ ಅವಧಿಯನ್ನು ವಿಸ್ತರಣೆ ಮಾಡುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಪ್ರಕೃತಿ ವಿಕೋಪದ ವಿಶೇಷ ಅನುದಾನದಡಿ ಹೆಕ್ಟೇರುವಿಗೆ 18 ಸಾವಿರ ರೂ.ಪರಿಹಾರ ಧನ ನೀಡಲು ಅವಕಾಶವಿದೆ. ಆದರೆ, ಅಧಿಕಾರಿಗಳು ತಾಂತ್ರಿಕ ಸರ್ವೇ ಮಾಡಿ ಮಳೆಹಾನಿ ಅಥವಾ ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಕೇವಲ ೫೦೦ ರೂ. ಪರಿಹಾರ ನೀಡುತ್ತಿರುವುದು ರೈತರಿಗೆಮಾಡುವ ಅವಮಾನ ಎಂದರು.
ಪ್ರತಿಭಟನೆಗೆ ಬೆಂಬಲ: ಅಡಿಕೆ ಕೊಳೆರೋಗದಿಂದ ಕಂಗಾಲಾದ ತಾಲೂಕಿನ ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಂಟ್ವಾಳ ತಾಲೂಕಿನ ಅಡಿಕೆ ಬೆಳೆಗಾರರ ಒಕ್ಕೂಟ ಹಾಗೂ ರೈತ ಸಂಘ, ಹಸಿರು ಸೇನೆ ಇವರ ಸಂಯುಕ್ತಾಶ್ರಯದಲ್ಲಿ ಸೆ.4ರಂದು ಬಿ.ಸಿ.ರೋಡು ತಾಲೂಕು ಕಚೇರಿಯ ಮುಂಭಾಗದಲ್ಲಿ ನಡೆಯುವ ಪ್ರತಿಭಟನೆ ತನ್ನ ಸಂಪೂರ್ಣ ಬೆಂಬಲವಿದೆ ಎಂದು ಶಾಸಕರು ತಿಳಿಸಿದರು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.