ಬಂಟ್ವಾಳ

ಜಗತ್ತಿಗೆ ಸಮಾನತೆಯ ಆದರ್ಶ ಬೋಧಿಸಿದ ಶ್ರೀಕೃಷ್ಣ

ಬಡವ ಬಲ್ಲಿದನೆಂಬ ಬೇಧ ಬೇಡ, ಸರ್ವರನ್ನೂ ಸಮಾನ ದೃಷ್ಟಿಯಿಂದ ನೋಡು, ಇದು ಶ್ರೀಕೃಷ್ಣ ಭಗವಂತ ಜಗತ್ತಿಗೆ ಬೋಧಿಸಿದ ನೀತಿ ಪಾಠ, ಶ್ರೀಕೃಷ್ಣನ ಬದುಕೇ ನಮಗೆಲ್ಲರಿಗೂ ಆದರ್ಶ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಭಾಕಾರ್ಯಕ್ತಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದುಷ್ಟರಿಗೆ ಶಿಕ್ಷೆ , ಶಿಷ್ಟರಿಗೆ ರಕ್ಷಣೆ ನೀಡುತ್ತಾ ಜಗತ್ ರಕ್ಷಕನಾದ ಶ್ರೀಕೃಷ್ಣ ಲೋಕದ ಗುರುವಾಗಿ ಮೆರೆದವನು. ಮಗುವಾಗಿನಿಂದ ತೊಡಗಿ ಪ್ರತೀ ಹಂತದಲ್ಲೂ ಜಗತ್ತನ್ನು ರಕ್ಷಿಸಿದ ಶ್ರೀಕೃಷ್ಣ ನ ಮಹಿಮೆ ಅಪಾರ ಎಂದು ಅವರು ಹೇಳಿದರು.

ಪತ್ರಕರ್ತ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ಮಾತನಾಡಿ, ಶ್ರೀಕೃಷ್ಣ ಎಲ್ಲರನ್ನೂ, ಎಲ್ಲವನ್ನೂ ಗೆದ್ದವ. ಮಗುವಾಗಿ, ಗೋಪಾಲಕನಾಗಿ, ಗುರುವಾಗಿ, ದೇವರಾಗಿ, ಸೈನಿಕನಾಗಿ, ಸ್ನೇಹಿತನಾಗಿ, ಸಹೋದರನಾಗಿ,ಜ್ಞಾನಿಯಾಗಿ, ರಕ್ಷಕನಾಗಿ, ಆಡಳಿತಗಾರನಾಗಿ, ರಾಜನೀತಿ ಪರಿಣತನಾಗಿ, ಸಾರಥಿಯಾಗಿ ಹೀಗೆ ಯಾವುದು ಹೇಗಿರಬೇಕು ಎಂದು ಮನದಟ್ಟು ಮಾಡಿದವ. ದೇವರ ನಡುವೆ ಕಾಣುವ ಆದರ್ಶ ಮನುಷ್ಯ ಶ್ರೀಕೃಷ್ಣ ಎಂದರು.

ಎಎಸ್ ಐ ರಾಮಣ್ಣ ಗೌಡ, , ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಬಿ ಸಿ ವಿಠಲ್, ಅಂಜನಪ್ಪ ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಶ್ರೀನಿವಾಸ, ಚುನಾವಣಾ ಶಾಖೆಯ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ,ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬಂದಿ ವರ್ಗ ಗ್ರಾಮ ಕರಣಿಕರು ಗ್ರಾಮ ಸಹಾಯಕರು ಹಾಜರಿದ್ದರು. ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ,ವಂದಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.