ಬಂಟ್ವಾಳ

ಮಿನಿ ವಿಧಾನಸೌಧಕ್ಕೆ ಶಾಸಕ ದಿಢೀರ್ ಭೇಟಿ, ಪರಿಶೀಲನೆ


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬುಧವಾರ ಬೆಳಗ್ಗೆ ಇಲ್ಲಿನ ಮಿನಿ ವಿಧಾನಸೌಧಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಜಾಹೀರಾತು

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಿನಿ ವಿಧಾನಸೌಧದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಮಸ್ಯೆ ಇದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ದೂರಿನ ಹಿನ್ನೆಲೆಯಲ್ಲಿ ಆಗಮಿಸಿದ್ದೇನೆ. ಇದೇ ಸಂದರ್ಭ ಮಿನಿ ವಿಧಾನಸೌಧದೊಳಗಿನ ನಾನಾ ಸರಕಾರಿ ಕಚೇರಿಗಳನ್ನು ವೀಕ್ಷಿಸಿದ್ದು, ಅಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಜನರ ಕಾರ್ಯಗಳನ್ನು ನಡೆಸಲು ಉಂಟಾಗುವ ತೊಡಕುಗಳನ್ನು ಪರಿಶೀಲಿಸಿದ್ದೇನೆ. ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಶಾಸಕನ ನೆಲೆಯಲ್ಲಿ ಮಾಡಬಹುದಾದ ಪ್ರಯತ್ನಗಳನ್ನು ನಡೆಸುತ್ತೇನೆ ಎಂದು ಹೇಳಿರುವುದಾಗಿ ಅವರು ತಿಳಿಸಿದರು.

ಆಗಾಗ್ಗೆ ವಿದ್ಯುತ್ ವ್ಯತ್ಯಯವಾಗುವ ಕುರಿತು ಗಮನ ಸೆಳೆದ ತಹಶೀಲ್ದಾರ್ ಪುರಂದರ ಹೆಗ್ಡೆ, ಡೀಸೆಲ್ ಗೆ ತಗಲುವ ವೆಚ್ಚದ ಕುರಿತು ತಿಳಿಸಿದರು. ಈ ಸಂದರ್ಭ ಸೋಲಾರ್ ಅಳವಡಿಕೆ ಮಾಡುವ ವಿಚಾರವನ್ನೂ ಶಾಸಕರು ಪ್ರಸ್ತಾಪಿಸಿ, ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭ ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಸಹಿತ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಶಾಸಕರ ಜತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ