ಹಲವೆಡೆ ಬಂದ್, ಶಾಸಕ ಕಾರಿಗೆ ಕಲ್ಲು ತೂರಾಟ

ಬಂಟ್ವಾಳನ್ಯೂಸ್ ವರದಿ

 

ಜಾಹೀರಾತು

ಜಾಹೀರಾತು

ಕಾಂಗ್ರೆಸ್ ಸಹಿತ ಹಲವು ಪಕ್ಷಗಳು ಕರೆ ನೀಡಿದ ಭಾರತ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಾದ್ಯಂತ ಬಿ.ಸಿ.ರೋಡ್ ಮತ್ತು ಹಲವು ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದರೆ, ಕಲ್ಲಡ್ಕದ ಕೆಲವು ಪ್ರದೇಶಗಳಲ್ಲಿ ಎಂದಿನಂತೆಯೇ ಮಳಿಗೆಗಳು ತೆರೆದಿದ್ದವು. ಬಸ್ಸುಗಳು ಇಲ್ಲದ ಕಾರಣ ಜನಸಂಚಾರ ವಿರಳವಿತ್ತು. ಆಟೋ ರಿಕ್ಷಾಗಳು ಎಂದಿನಂತೆಯೇ ಸ್ಟ್ಯಾಂಡ್ ನಲ್ಲಿ ನಿಂತಿದ್ದು, ಕರ್ತವ್ಯ ನಿರ್ವಹಿಸಿದವು.

ಮಾಜಿಯಲ್ಲಿ ಪಿಕಪ್ ವಾಹನ ಚಾಲಕನೋರ್ವನ ಮೇಲೆ ಹಲ್ಲೆ ನಡೆದಿದ್ದು, ಆತ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾನೆ. ಅರುಣ್ ಎಂಬಾತ ಹಲ್ಲೆಗೊಳಗಾದ ಯುವಕ.

ಜಾಹೀರಾತು

ಇದೇ ವೇಳೆ ಬೋಳಂಗಡಿ ಎಂಬಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪಕ್ಷದ ನಾಯಕರೊಂದಿಗೆ ಕಾರಿನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಘಟನೆ ಬಳಿಕ ಶಾಸಕ ಹಾಗೂ ಪಕ್ಷದ ನಾಯಕರಾದ ಎ.ಗೋವಿಂದ ಪ್ರಭು, ದೇವದಾಸ ಶೆಟ್ಟಿ ಮತ್ತಿತರರು ನೇರವಾಗಿ ಬಂಟ್ವಾಳ ಎಎಸ್ಪಿ ಕಚೇರಿಗೆ ಬಂದು ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಎಸ್ಪಿ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಧರಣಿ ಕುಳಿತರು.

ಜಾಹೀರಾತು

ಈ ಸಂದರ್ಭ ಎಎಸ್ಪಿ ಋಷಿಕೇಶ್ ಸೋನಾವಣೆ ಜೊತೆ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಕಾಂಗ್ರೆಸ್ ಪಕ್ಷವು ಮಾಜಿ ಸಚಿವರ ನೇತೃತ್ವದಲ್ಲಿ ಬಲಾತ್ಕಾರವಾಗಿ ಬಂದ್ ಮಾಡಿಸುತ್ತಿದೆ. ನನ್ನ ವಾಹನಕ್ಕೆ ಕಲ್ಲು ತೂರಾಟ ಮಾಡಲಾಗಿದೆ. ಸಣ್ಣಪುಟ್ಟ ವಿಚಾರಕ್ಕೂ ಸೇ.144ರನ್ವಯ ನಿಷೇಧಾಜ್ಞೆ ವಿಧಿಸುವ ಸರಕಾರ, ಬಂದ್ ಅನ್ನು ತಾನೇ ಖುದ್ದು ನಿಂತು ಮಾಡಿಸುತ್ತಿದೆ. ಮೆರವಣಿಗೆಗಳನ್ನು ಯಾರ ಅನುಮತಿ ಮೇಲೆ ಮಾಡಿಸಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಬಂದ್ ಗೆ ಸರಕಾರದ ನೇತೃತ್ವದಲ್ಲೇ ಪ್ರಚೋದನೆ ನೀಡಲಾಗುತ್ತಿದೆ. ಬೋಳಂಗಡಿಯಲ್ಲಿ ಉದ್ದೇಶಪೂರ್ವಕವಾಗಿಯೇ ನನ್ನ ಕಾರಿನ ಮೇಲೆ ದಾಳಿ ಮಾಡಲಾಗಿದೆ. ಕಲ್ಲು ಕಾರಿನ ಎಡಭಾಗಕ್ಕೆ ತಾಗಿದ್ದು, ಗಾಜಿಗೇನಾದರೂ ಬಿದ್ದಿದ್ದರೆ ಅಪಾಯವಿತ್ತು. ರಸ್ತೆಯಲ್ಲಿ ಮಾಜಿ ಸಚಿವರು ಎಸ್ಕಾರ್ಟ್ ಜೊತೆ ಸಂಚರಿಸುತ್ತಿದ್ದು, ಬಂದ್ ಮಾಡಿಸುತ್ತಿದ್ದಾರೆ. ಎಂ.ಎಲ್.ಎ.ಗೆ ಇಲ್ಲಿ ಭದ್ರತೆ ಇಲ್ಲ ಎಂದರೆ ಏನರ್ಥ ಎಂದು ರಾಜೇಶ್ ನಾಯ್ಕ್ ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಗೋವಿಂದ ಪ್ರಭು, ಪೊಲೀಸರು ಬಂದ್ ನಡೆಸುವವರನ್ನು ಬೆಂಬಲಿಸದೆ ಸಾರ್ವಜನಿಕರಿಗೆ ಸುರಕ್ಷತೆ ನೀಡಬೇಕು. ಆದರೆ ಎಂಎಲ್ ಎ ಅವರಿಗೇ ರಕ್ಷಣೆ ಇಲ್ಲದಂತಾಗಿದೆ. ಇದಕ್ಕೆ ಡಿಸಿ, ಎಸ್ಪಿ ಹೊಣೆ, ಅವರು ಬರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಧರಣಿ ಕುಳಿತರು.

ಶಾಸಕರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದು ಗಂಭೀರ ವಿಚಾರ ಎಂದ ಎಎಸ್ಪಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಜಾಹೀರಾತು

ಬಂದ್ ಗೆ ಬೆಂಬಲಿಸುವಂತೆ ಮನವಿ:

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಬಿ.ಸಿ.ರೋಡ್ ಪರಿಸರದಲ್ಲಿ ಬಂದ್ ಗೆ ಬೆಂಬಲ ಸೂಚಿಸುವಂತೆ ಕಾಂಗ್ರೆಸ್ ನಿಂದ ಅಭಿಯಾನ ನಡೆಯಿತು. ಈ ಸಂದರ್ಭ ಜನಪ್ರತಿನಿಧಿಗಳು, ಪಕ್ಷದ ನಾಯಕರು ಇದ್ದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರಮುಖರಾದ ಪಿ.ಎ.ರಹಿಂ, ಮಹಮ್ಮದ್ ಶಫಿ, ಇಬ್ರಾಹಿಂ ಕೈಲಾರ್ ಮತ್ತಿತರರು ಬಿ.ಸಿ.ರೋಡಿನ ಫ್ಲೈಓವರ್ ಬಳಿ ಪ್ರತಿಭಟನೆ ನಡೆಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಲವೆಡೆ ಬಂದ್, ಶಾಸಕ ಕಾರಿಗೆ ಕಲ್ಲು ತೂರಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*