ಬಂಟ್ವಾಳ

ಬೊಂಡಾಲ ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬದ ಸಂಭ್ರಮ

ಬೊಂಡಾಲದ ಯುವ ಸಂಗಮ ಸೇವಾ ಟ್ರಸ್ಟ್ ಆಯೋಜಿಸುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬದ ಸಂಭ್ರಮವನ್ನು ಆಚರಿಸುತ್ತಿದ್ದು, ಈ ಬಾರಿ ಶ್ರೀದೇವರಿಗೆ ರಜತ ಪ್ರಭಾವಳಿಯನ್ನು ಸಮರ್ಪಿಸಲಾಗುತ್ತದೆ. 13ರಿಂದ 15ರವರೆಗೆ ಕೀರ್ತಿಶೇಷ ಬೊಂಡಾಲ ಜಗನ್ನಾಥ ಶೆಟ್ಟಿ ವೇದಿಕೆ ಶೇಡಿಗುರಿಯ ಯುವ ಸಂಗಮ ಸಮುದಾಯ ಭವನದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ನಡೆಯಲಿದೆ ಎಂದು ಯುವ ಸಂಗಮ ಸೇವಾ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಸಂಗಮ ಟ್ರಸ್ಟ್ ೧೯೯೩ರಲ್ಲಿ ಕೀರ್ತಿಶೇಷ ಬೊಂಡಾಲ ಜಗನ್ನಾಥ ಶೆಟ್ಟಿ ಅವರ ಮುಂದಾಳತ್ವದಲ್ಲಿ ಊರಿನ ಹಿರಿಯರು ಮತ್ತು ಯುವಕರ ಸಹಭಾಗಿತ್ವದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದಲ್ಲದೆ, ಸಾಮಾಜಿಕ ಕಾರ್ಯಕ್ರಮಗಳಾದ ರಕ್ತದಾನ ಶಿಬಿರ ಸಹಿತ ಹಲವು ಜನೋಪಯೋಗಿ ಸೇವಾ ಕೈಂಕರ್ಯಗಳನ್ನು ನಡೆಸುತ್ತಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ 25 ವರ್ಷಗಳಾಗುವ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ರಜತ ಪ್ರಭಾವಳಿ ಸಮರ್ಪಣೆ ನಡೆಯುತ್ತದೆ. 13ರಂದು ದೇವರ ಪ್ರತಿಷ್ಠಾಪನೆ, ರಜತ ಪ್ರಭಾವಳಿ ಸಮರ್ಪಣೆ ನಡೆಯಲಿದ್ದು, ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸುವರು. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೧೫ರಂದು ಶನಿವಾರ ಸಂಜೆ ೪ ಗಂಟೆಗೆ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ವಿವರ ನೀಡಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಅಂಚನ್ ಪದವು, ಸಂಚಾಲಕ ಯಶೋಧರ ಬಂಗೇರ ಕೊಲ್ಲೂರು, ಪ್ರಧಾನ ಕಾರ್ಯದರ್ಶಿ ಸುಧೀರ್ ನಿರ್ಮಲ್, ಯುವ ಸಂಗಮ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪಿ.ಕೇಶವ ನಾಯ್ಕ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.