ಬಂಟ್ವಾಳ

ಸಾಕ್ಷರತಾ ಆಂದೋಲನದಿಂದ ನವಚೇತನ: ಮೌನೇಶ್ ವಿಶ್ವಕರ್ಮ

ಅನಕ್ಷರಸ್ತರ ಬಾಳಿನಲ್ಲಿ ನವಬೆಳಕು ತುಂಬಿದ್ದು ಸಾಕ್ಷರತಾ ಆಂದೋಲನ ಎಂದು ಪತ್ರಕರ್ತ, ರಂಗಕರ್ಮಿ ಮೌನೇಶ್ ವಿಶ್ವಕರ್ಮ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೇಸೀ ಐ ಜೋಡುಮಾರ್ಗ ನೇತ್ರಾವತಿಯ ಸಹಭಾಗಿತ್ವದಲ್ಲಿ ನಡೆದ ಅಂತರಾಷ್ಟೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣ ಬಿ.ಸಿ.ರೋಡು ಇಲ್ಲಿ ನಡೆದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಮಾತನಾಡುತ್ತ ಸಾಕ್ಷರತೆ ಇಂದು ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗದೆ ಡಿಜಿಟಲ್ ಸಾಕ್ಷರತೆಯತ್ತ ಮುಖ ಮಾಡಿದೆ , ಆದ್ದರಿಂದ ತಂತ್ರಜ್ಞಾನ ಮತ್ತು ಸಂಪರ್ಕ ಮಾಧ್ಯಮದ ಲ್ಲಿ ಪ್ರತಿಯೊಬ್ಬ ವ್ಯಕ್ತಿ ಸಾಕ್ಷರತೆಯತ್ತ ಸಾಗುವ ಮಾರ್ಗದಲ್ಲಿ ಪಯಣ ಸಾಗಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಉಪಸ್ತಿತರಿದ್ದರು. ಸುರೇಶ್ ಸಾಲಿಯಾನ್ ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

11 hours ago