ಬಂಟ್ವಾಳ

ಸಾಕ್ಷರತಾ ಆಂದೋಲನದಿಂದ ನವಚೇತನ: ಮೌನೇಶ್ ವಿಶ್ವಕರ್ಮ

ಅನಕ್ಷರಸ್ತರ ಬಾಳಿನಲ್ಲಿ ನವಬೆಳಕು ತುಂಬಿದ್ದು ಸಾಕ್ಷರತಾ ಆಂದೋಲನ ಎಂದು ಪತ್ರಕರ್ತ, ರಂಗಕರ್ಮಿ ಮೌನೇಶ್ ವಿಶ್ವಕರ್ಮ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೇಸೀ ಐ ಜೋಡುಮಾರ್ಗ ನೇತ್ರಾವತಿಯ ಸಹಭಾಗಿತ್ವದಲ್ಲಿ ನಡೆದ ಅಂತರಾಷ್ಟೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣ ಬಿ.ಸಿ.ರೋಡು ಇಲ್ಲಿ ನಡೆದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಮಾತನಾಡುತ್ತ ಸಾಕ್ಷರತೆ ಇಂದು ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗದೆ ಡಿಜಿಟಲ್ ಸಾಕ್ಷರತೆಯತ್ತ ಮುಖ ಮಾಡಿದೆ , ಆದ್ದರಿಂದ ತಂತ್ರಜ್ಞಾನ ಮತ್ತು ಸಂಪರ್ಕ ಮಾಧ್ಯಮದ ಲ್ಲಿ ಪ್ರತಿಯೊಬ್ಬ ವ್ಯಕ್ತಿ ಸಾಕ್ಷರತೆಯತ್ತ ಸಾಗುವ ಮಾರ್ಗದಲ್ಲಿ ಪಯಣ ಸಾಗಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಉಪಸ್ತಿತರಿದ್ದರು. ಸುರೇಶ್ ಸಾಲಿಯಾನ್ ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.