ಸಮಸ್ಯೆಗಳು ತನ್ನ ಬಳಿ ಬಾರದಂತೆ ಕೆಲಸ ನಿರ್ವಹಿಸಿ: ಅಧಿಕಾರಿಗಳಿಗೆ ಖಾದರ್ ಕಿವಿಮಾತು

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಭೂಪರಿವರ್ತನೆ ಮತ್ತು ದಾಖಲೀಕರಣ ಹಾಗೂ ಇತರ ಯಾವುದೇ ವಿಷಯಗಳಿಗೆ ಸಂಬಂಧಿಸಿ ಜನರ ಸಮಸ್ಯೆಗಳು ಬಾರದೇ ಇರುವಂತೆ ಕೆಲಸ ನಿರ್ವಹಿಸಿ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಬಂಟ್ವಾಳ ತಾಪಂ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆಗೆ ಫಲಾನುಭವಿಗಳ ಆಯ್ಕೆ ಸಂದರ್ಭ ಕೆಲವರಿಗೆ ಕೊಟ್ಟು, ಕೆಲವರಿಗೆ ಕೊಡದೇ ಇದ್ದರೆ, ಬೇರೆ ಅರ್ಥಗಳಿಗೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಹೇಳಿದರು.

ಬಾಪೂಜಿ ಸೇವಾ ಕೇಂದ್ರಗಳಿದ್ದರೂ ಸರಿಯಾದ ಕೆಲಸವನ್ನು ನಿರ್ವಹಿಸಲು ಆಗುತ್ತಿಲ್ಲ. ಅಲ್ಲಿ ಹಲವು ಸಮಸ್ಯೆಗಳಿವೆ ಎಂಬುದನ್ನು ತುಂಬೆ ಗ್ರಾಪಂಗೆ ಒಳಪಟ್ಟ ನಾಗರಿಕರು ಗಮನಕ್ಕೆ ತಂದಾಗ ಅಧಿಕಾರಿಗಳನ್ನು ವಿಚಾರಿಸಿದ ಖಾದರ್, ತ್ವರಿತ ಸೇವೆಗೋಸ್ಕರ ಬಾಪೂಜಿ ಸೇವಾ ಕೇಂದ್ರಗಳನ್ನು ಗ್ರಾಪಂ ಮಟ್ಟದಲ್ಲಿ ಸ್ಥಾಪಿಸಲಾಗಿದ್ದರೂ ಕೆಲಸವಾಗದೇ ಇರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿದರು.

ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಇದೇ ತಿಂಗಳ 20ರಂದು ಮಂಗಳೂರಿನಲ್ಲಿ ನಡೆಸಲಾಗುವುದು. ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳನ್ನೂ ನಡೆಸಲಿದ್ದು, ನನ್ನ ಬಳಿ ಅಹವಾಲುಗಳು ಬಾರದಂತೆ ನೋಡಿಕೊಳ್ಳಬೇಕ ಎಂದ ಖಾದರ್, ಅಂಗನವಾಡಿ ವ್ಯಾಪ್ತಿಯಲ್ಲಿ ಯಾರೆಲ್ಲ ಫಲಾನುಭವಿಗಳಿದ್ದರೂ ಅವರನ್ನು ಗುರುತಿಸಿ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರಿಗೆ ಸರಕಾರದ ಯೋಜನೆಗಳ ಪ್ರಯೋಜನ ದೊರಕಿಸಿಕೊಡುವ ಜವಾಬ್ದಾರಿ ಇಲಾಖೆಗಿದ್ದು, ಇದರಲ್ಲಿ ಲೋಪದೋಷಗಳುಂಟಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಅಧಿಕಾರಿಗಳು, ಜನಪ್ರತಿನಿಧಿಗಳು ಹೊಂದಾಣಿಕೆಯಿಂದ ಜನರಿಗೆ ಬೇಕಾದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಖಾದರ್ ಈ ಸಂದರ್ಭ ಹೇಳಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಗ”ಳ ಒಟ್ಟು 72 ಫಲಾನುಭವಿಗಳಿಗೆ 5,88,625 ರೂಗಳು ಹಾಗೂ 94ಸಿ, ಸಿಸಿಯ 59 ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಫಲಾನುಭವಿಗಳ ಪಟ್ಟಿ ವಾಚಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾಧವ ಮಾವೆ, ಮಮತಾ ಡಿ.ಎಸ್. ಗಟ್ಟಿ, ರವೀಂದ್ರ ಕಂಬಳಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಇಒ ರಾಜಣ್ಣ, ಮಂಗಳೂರು ತಾಪಂ ಅಧ್ಯಕ್ಷ ಮೋನು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಮಸ್ಯೆಗಳು ತನ್ನ ಬಳಿ ಬಾರದಂತೆ ಕೆಲಸ ನಿರ್ವಹಿಸಿ: ಅಧಿಕಾರಿಗಳಿಗೆ ಖಾದರ್ ಕಿವಿಮಾತು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*