ವಾಮದಪದವು

ರಾಷ್ಟ್ರಮಟ್ಟದಲ್ಲಿ ರಜತ ಪದಕ ವಿಜೇತೆ ರಮ್ಯಶ್ರೀ ಜೈನ್ ಗೆ ಸಿದ್ಧಕಟ್ಟೆಯಲ್ಲಿ ಅದ್ದೂರಿ ಸ್ವಾಗತ


ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಆಂಧ್ರ ಪ್ರದೇಶದ ಕಥಕ್‌ನಲ್ಲಿ ನಡೆದ 34ನೇ ರಾಷ್ಟ್ರ ಮಟ್ಟದ ಜೂನಿಯರ್ ವಿಭಾಗದ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಗಳಿಸಿದ್ದಾಳೆ.


ಈ ಮೊದಲು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದಿದ್ದ 34ನೇ ರಾಜ್ಯ ಜ್ಯೂನಿಯರ್ ಹಾಗೂ ಸಿನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಗುಂಡು ಎಸೆತದಲ್ಲಿ ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಳು. ಸೆ.14 ಮತ್ತು 15ರಂದು ಆಂಧ್ರ ಪ್ರದೇಶದ ಕಥಕ್‌ನಲ್ಲಿ ನಡೆದ 34ನೇ ರಾಷ್ಟ್ರೀಯ ಜ್ಯೂನಿಯರ್ ಹಾಗೂ ಸಿನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿಯ ಪದಕಗಳಿಸಿದ್ದಾಳೆ. ಬಂಟ್ವಾಳ ತಾಲೂಕಿನ ಸಂಗಬೆಟ್ಟು ನಿವಾಸಿ ರವೀಂದ್ರ ಜೈನ್ ಮತ್ತು ಪದ್ಮಶ್ರೀ ದಂಪತಿಗಳ ಪುತ್ರಿ.

ಜಾಹೀರಾತು

ಸಂಗಬೆಟ್ಟು-ಸಿದ್ಧಕಟ್ಟೆಯಲ್ಲಿ ಮಂಗಳವಾರ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ, ಶಾಲಾ ಮುಖ್ಯ ಶಿಕ್ಷಕಿ ಸಬಿತಾ ಲವೀನಾ, ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ಜಯಂತ್, ಕಾಲೇಜು ಪ್ರಾಂಶುಪಾಲ ಸಂತೋಷ್ ಕುಮಾರ್, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ಮಾಧವ ಶೆಟ್ಟಿಗಾರ್, ಮಾಜಿ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಕ್ರೀಡಾಪಟು ಜಯ ನಾಯ್ಕ, ಡಾ. ಪ್ರಭಾಚಂದ್ರ ಜೈನ್, ಡಾ. ಸುಧೀಪ್ ಕುಮಾರ್, ಉದ್ಯಮಿಗಳಾದ ಪ್ರಶಾಂತ್ ಶೆಟ್ಟಿ, ಭರತ್ ಜೈನ್ ಅಭಿನಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ