ಬಂಟ್ವಾಳ

ವೈಜ್ಞಾನಿಕ ಅರಿವು ವೃದ್ಧಿಸಲು ತಾರಾಲಯ ವೀಕ್ಷಣೆ ಸಹಕಾರಿ: ಶೆಣೈ

ಮಕ್ಕಳಲ್ಲಿ ವೈಜ್ಞಾನಿಕ ಅರಿವು ಹೆಚ್ಚಾದಾಗ, ಶೈಕ್ಷಣಿಕ ವಿಚಾರಧಾರೆಗಳ ಗ್ರಹಿಕೆ ಸುಲಭ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ತಿರುಮಲ ಶ್ರೀ ವೆಂಕಟರಮಣ ಸ್ವಾಮಿ ದೇವಳದ ಟ್ರಸ್ಟಿ ಪುರುಷೋತ್ತಮ ಶೆಣೈ ಹೇಳಿದರು.

ಜಾಹೀರಾತು

ಬಂಟ್ವಾಳ ರೋಟರೀ ಕ್ಲಬ್ ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಬಂಟ್ವಾಳದ ಎಸ್ ವಿಎಸ್ ದೇವಳ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ನಂದಿನಿ ಶೆಣೈ ಮಾತನಾಡಿ, ಮಕ್ಕಳ ಶಿಕ್ಷಣ ಹಾಗೂ ವಿಕಾಸದ ದೃಷ್ಟಿಯಲ್ಲಿ ಬಂಟ್ವಾಳ ರೋಟರೀ ಕ್ಲಬ್ ನ ಸೇವಾಕಾರ್ಯ ಶ್ಲಾಘನೀಯ ಎಂದರು. ಶಾಲೆಯ ಹಲವು ಕಾರ್ಯಕ್ರಮಗಳಿಗೆ ಕ್ಲಬ್ ನೀಡುವ ಸಹಕಾರ ಮಕ್ಕಳ ಶೈಕ್ಷಣಿಕ ಪ್ರಗತಿಯ ಜೊತೆಯಲ್ಲಿ ಸಮಗ್ರ ವಿಕಾಸಕ್ಕೆ ನೆರವಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ರೋಟರೀ ಕ್ಲಬ್ ಅಧ್ಯಕ್ಷರೋ. ಮಂಜುನಾಥ ಆಚಾರ್ಯ ಮಾತನಾಡಿ, ರೋಟರೀ ಕ್ಲಬ್ ಸುವರ್ಣ ವರ್ಷಾಚರಣೆಯ ಸಂದರ್ಭಕ್ಕೆ ಪೂರಕವಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿದ್ದು, ಕಳೆದೆರಡು ದಿನಗಳ ತಾರಾಲಯ  ಸಂಚಾರದಲ್ಲಿ ವೀಕ್ಷಕ  ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.  ರೋಟರಿ ಕ್ಲಬ್ ಪದಾಧಿಕಾರಿಗಳಾದ ರಿತೇಶ್ ಬಾಳಿಗಾ, ಸದಾಶಿವ ಬಾಳಿಗಾ, ಮೇಘಾ ಆಚಾರ್ಯ, ವಸಂತ ಪ್ರಭು, ಡಾ.ನಿರಂಜನ ಆಚಾರ್ಯ, ಬೆಂಗಳೂರು ಆರ್ಯಭಟ ತಾರಾಲಯದ ವ್ಯವಸ್ಥಾಪಕರಾದ ಸತೀಶ್, ಲಕ್ಷ್ಮೀಪತಿ ಉಪಸ್ಥಿತರಿದ್ದರು. ಶಿಕ್ಷಕ ಶಿವಾನಂದ ಬಾಳಿಗಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ