ಬಂಟ್ವಾಳ

ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಸನ್ಮಾನ

ಮಂಗಳೂರಿನ ರೇಡಿಯೋ ಸಾರಂಗ್ ಸಂಸ್ಥೆ ವತಿಯಿಂದ ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರನ್ನು ಬುಧವಾರ ಸಂಜೆ ಏರ್ಯ ಬೀಡು ಮನೆಯಲ್ಲಿ ಸನ್ಮಾನಿಸಲಾಯಿತು.

ಜಾಹೀರಾತು

ಹೃದಯರಾಗ ಕಾರ್ಯಕ್ರಮದಡಿ ಆಳ್ವರ ಸಾಹಿತ್ಯ- ಸಾಮಾಜಿಕ ಬದುಕಿನ ಬಗ್ಗೆ ನೇರಪ್ರಸಾರ ಮಾತುಕತೆ ನಡೆಸಿದ ಸಾರಂಗ್ ಸಂಸ್ಥೆಯವರು ಬಳಿಕ ಏರ್ಯರನ್ನು ಸನ್ಮಾನಿಸಿದರು.

ಜನರು ನನ್ನ ಮೇಲೆ ಇಟ್ಡಿರುವ ಪ್ರೀತಿಯೇ ನನಗೆ ಜೀವನೋಲ್ಸಾಸ ನೀಡುತ್ತಿದೆ. ಪರಸ್ಪರ ಪ್ರೀತಿಯ ಬೆಸುಗೆಯ ಸಮಾಜ ಕಟ್ಟುವುದು ಇಂದಿನ ಅಗತ್ಯವಾಗಿದೆ ಎಂದು ಆಳ್ವ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಮಾತನಾಡಿ ಏರ್ಯರ ನಡೆ, ನುಡಿ ಮತ್ತು ಬದುಕು ನಮಗೆಲ್ಲಾ ಮಾದರಿಯಾದುದು. ಅವರು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನುಪಮವಾದುದು ಎಂದರು.

ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸರಸ್ವತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್, ಸಾರಂಗ್ ಸಂಸ್ಥೆಯ ಎಡ್ವರ್ಡ್ ಲೋಬೋ, ಸಿಂಚನ ಶ್ಯಾಮ್, ಪುಷ್ಪರಾಜ್ ರಾವ್, ಅಭಿಷೇಕ್ ಶೆಟ್ಟಿ, ಮಯೋಲ ಮಾರ್ಟಿಸ್ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

10 hours ago