ನಮ್ಮ ಭಾಷೆ

ಸೆ.22ರಂದು ಬಿ.ತಮ್ಮಯ ಅವರಿಗೆ ಚಾವಡಿ ತಮ್ಮನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರಿಗೆ ಕೊಡಮಾಡುವ “ಚಾವಡಿ ತಮ್ಮನ” ಗೌರವಕ್ಕೆ ಈ ಬಾರಿ ಹಿರಿಯ ಸಾಹಿತಿ, ತುಳು ಲಿಪಿ ಶಿಕ್ಷಕ ಬಿ.ತಮ್ಮಯ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳನ್ಯೂಸ್ ನಲ್ಲಿ ಅವರು ಬರೆದ ನಮ್ಮ ಭಾಷೆ ಎಂಬ ಅಂಕಣ ಜನಪ್ರಿಯ.

ಜಾಹೀರಾತು

ಮಂಗಳೂರು ಉರ್ವಸ್ಟೋರ್‌ನಲ್ಲಿರುವ ಅಕಾಡೆಮಿಯ ತುಳುಭವನದ “ಸಿರಿ ಚಾವಡಿಯಲ್ಲಿ” ಬಿ.ತಮ್ಮಯ ಅವರಿಗೆ “ಚಾವಡಿ ತಮ್ಮನ” ಕಾರ್‍ಯಕ್ರಮವು ಸೆ.22ರಂದು ಅಪರಾಹ್ನ 3.30ಕ್ಕೆ ನಡೆಯಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ.ಬಿ.ಮತ್ತು ಕಾರ್‍ಯಕ್ರಮದ ಸದಸ್ಯ ಸಂಚಾಲಕ ಎ.ಗೋಪಾಲ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಸಾಹಿತಿ ಡಾ.ಏರ್‍ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸುವರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಟಿ.ಹೆಬ್ಬಾರ್ ಬಿ.ತಮ್ಮಯರ ಬಗ್ಗೆ ಅಭಿನಂದನಾ ಭಾಷಣ ಮಾಡುವರು.

ತಮ್ಮಯರ ಪರಿಚಯ:
ವಿದ್ಯಾರ್ಥಿ ಜೀವನದಲ್ಲೇ ನಾಟಕ, ಯಕ್ಷಗಾನ, ತಾಳಮದ್ದಳೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಬಿ.ತಮ್ಮಯ ಅವರು ನಾನಾ ಕಡೆಗಳಲ್ಲಿ ಸಂಘಟನೆಗಳನ್ನು ಸ್ಥಾಪಿಸಿ ತುಳು ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸಿ ಪ್ರದರ್ಶಿಸಿದವರು.

ಜಾಹೀರಾತು

ಕಂದಾಯ ಇಲಾಖೆಯಲ್ಲಿ ವೃತ್ತಿ ಬದುಕಿನ ನಡುವೆಯೇ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡ ಇವರು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಕಾರ್‍ಯದರ್ಶಿಯಾಗಿ- ಅಧ್ಯಕ್ಷರಾಗಿ, ಯುವವಾಹಿನಿಯ ಸಲಹೆಗಾರರಾಗಿ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಪ್ರಸ್ತುತ “ತುಳುವೆ” ತುಳುಲಿಪಿ ಪತ್ರಿಕೆಯ ಸಂಪಾದಕರಾಗಿ, ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್‌ನ ಗೌರವ ಕಾರ್‍ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಹಣತೆ, ನಾರಾಯಣ ಗುರು ಭಜನೆ, ಚಿಂತನ ಮಂಥನ, ಹಿಂದಿರುಗಿ ನೋಡಿದಾಗ, ಕರಿಕೋಟು, ಕಾಡಿನ ಹಕ್ಕಿ ಹಾಡಿತು, ತಟಪಟ ಹನಿ, ತುಳುವೆರೆ ಪರ್ಬ, ತುಳು ಲಿಪಿ ಕಲ್ಪಿ-ತುಳು ಮೊದಲಾದ ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಹಲವಾರು ಶಾಲಾ ಕಾಲೇಜು ಮತ್ತು ಸಂಘಟನೆಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಲಿಪಿ ಕಲಿಸುವ ಮೂಲಕ “ತುಳು ಮಾಸ್ತರ್” ಎನಿಸಿಕೊಂಡಿದ್ದಾರೆ.

Articls related to B.Tammaya

ಅನ್ಯಾಯದ ವಿರುದ್ಧ ಹೋರಾಡಲು ಕರೆ ನೀಡಿದ್ದ ಕೋಟಿ ಚೆನ್ನಯರು

ಜಾಹೀರಾತು

https://bantwalnews.com/category/blogs/%E0%B2%A8%E0%B2%AE%E0%B3%8D%E0%B2%AE-%E0%B2%AD%E0%B2%BE%E0%B2%B7%E0%B3%86/

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ