ಕೊಡಗು ನೆರೆ ಸಂತ್ರಸ್ತರಿಗೆ ಯಕ್ಷಗಾನ ಕಲಾವಿದರ ಸಾಥ್: ನಿಧಿ ಸಮರ್ಪಣೆಗೆ 22ರಂದು ಯಕ್ಷಹಾಸ್ಯ ವೈಭವ

ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ತತ್ತರಗೊಂಡ ಕೊಡಗು ಜಿಲ್ಲಾ ನೆರೆ ಸಂತ್ರಸ್ತರ ನೆರವಿಗಾಗಿ ನಿಧಿ ಸಮರ್ಪಣೆಯ ಪ್ರಯುಕ್ತ ತುಳು ಯಕ್ಷ ಹಾಸ್ಯ ವೈಭವ ಕಾರ್ಯಕ್ರಮ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಸೆ. 22ರಂದು ಶನಿವಾರ ಸಂಜೆ 5.30ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ, ತಂಡದ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕಲಾವಿದರು ಸಂಭಾವನೆ ಪಡೆದುಕೊಳ್ಳದೆ ಪ್ರದರ್ಶನ ನೀಡಲಿದ್ದು, ಸಿನಿಮಾ, ರಂಗ ಕಲಾವಿದರೂ ಆಗಿರುವ ಅರವಿಂದ ಬೋಳಾರ್ ಅವರೂ ಈ ಕಾರ್ಯಕ್ರಮಕ್ಕೆ ಸಾಥ್ ನೀಡಲಿದ್ದಾರೆ.
ಗುರುವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರಪಾಡಿ ಅಶೋಕ್ ಶೆಟ್ಟಿ, ಕಾರ್ಯಕ್ರಮದಲ್ಲಿ ದಾನಿಗಳಿಂದ ಸಂಗ್ರಹಿತ ನಿಧಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಸೇವಾ ಭಾರತಿ ಸಂಚಾಲಿತ ಕೊಡಗು ಜಿಲ್ಲಾ ನೆರ ಸಂತ್ರಸ್ತರ ನಿಧಿಗೆ ಸಮರ್ಪಿಸಲಾಗುವುದು. ದಾನಿಗಳ ಸಹಕಾರದಿಂದ ಕಾರ್ಯಕ್ರಮವನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಕಲಾವಿದರು ಉಚಿತವಾಗಿ ಪ್ರದರ್ಶನ ನೀಡಲಿದ್ದಾರೆ. ಕಲಾಭಿಮಾನಿಗಳು ಸಹಕರಿಸಬೇಕಾಗಿ ಅವರು ವಿನಂತಿಸಿದ್ದಾರೆ. ಕಲಾವಿದ ಕೋಡಪದವು ದಿನೇಶ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಡಗು ನೆರೆ ಸಂತ್ರಸ್ತರಿಗೆ ಯಕ್ಷಗಾನ ಕಲಾವಿದರ ಸಾಥ್: ನಿಧಿ ಸಮರ್ಪಣೆಗೆ 22ರಂದು ಯಕ್ಷಹಾಸ್ಯ ವೈಭವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*