ಬಂಟ್ವಾಳ

ಲೈಂಗಿಕ ದೌರ್ಜನ್ಯ ಖಂಡಿಸಿ, ಜಮಾಅತ್-ವಿವಿಧ ಸಂಘಟನೆಗಳಿಂದ ಮೌನ ಕಾಲ್ನಡಿಗೆ ಜಾಥ

ಜಾಹೀರಾತು

ಗೂಡಿನಬಳಿ ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಹಾಗೂ ಆರೊಪಿಗಳಿಗೆ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ನೀಡುವಂತೆ ಒತ್ತಾಯಿಸಿ ಗೂಡಿನಬಳಿಯ  ಜಮಾಅತ್ ಆಡಳಿತ ಕಮಿಟಿ, ವಿವಿಧ ಸಂಘಟನೆ ಹಾಗೂ ಸಮಸ್ತ ನಾಗರಿಕರು ಕಪ್ಪುಪಟ್ಟಿ ಕಟ್ಟಿ ಗುರುವಾರ ಬಿ.ಸಿ‌.ರೋಡ್ ವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಅಲ್ಲದೆ, ಪ್ರಕರಣವನ್ನು ಖಂಡಿಸಿ ಗೂಡಿನಬಳಿಯ ಅಂಗಡಿ ಮುಂಗಟ್ಟುಗಳನ್ನು ಮುಚ್ವುವ ಮೂಲಕ ಬಂದ್ ಆಚರಿಸಲಾಯಿತು.

ಈ ಲೈಂಗಿಕ ದೌರ್ಜನ್ಯ   ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಕಾನೂನು ರಕ್ಷಣೆ, ಪರಿಹಾರ ನೀಡಬೇಕು. ಪ್ರಕರಣದಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಕೂಡಾ ಬಂಧಿಸಬೇಕು. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳನ್ನು ಕೂಡಾ ಶಿಕ್ಷಿಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬಂಟ್ವಾಳ ತಹಶಿಲ್ದಾರ್ ಪುರಂದರ ಹೆಗ್ಡೆ ಹಾಗೂ ಬಂಟ್ವಾಳ ಎಸ್ಸೈ ಚಂದ್ರಶೇಖರ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಾಥಾ ಮೊದಲು ಗೂಡಿನಬಳಿ ಮಸೀದಿಯಲ್ಲಿ ಖಂಡನಾ ಸಭೆ ನಡೆಯಿತು.ಈ ಸಂದರ್ಭದಲ್ಲಿ ಜಮಾಅತ್ ನ ಅಧ್ಯಕ್ಷ ಹಾಜಿ.ಜಿ.ಮುಹಮ್ಮದ್, ಮಾಜಿ ಪುರಸಭಾ ಸದಸ್ಯ ಇಕ್ಬಾಲ್ ಐಎಂಆರ್, ಜಿ.ಕೆ.ಅಹ್ಮದ್ ಬಾವ, ಜಿ.ಕೆ.ಬಶೀರ್, ಪತ್ರಕರ್ತ ಫಾರೂಕ್ ಗೂಡಿನಬಳಿ, ಅಬೂಬಕರ್ ಕೆ.ಎಚ್., ಲತೀಫ್ ಖಾನ್ ಅಬೂಬಕರ್, ಇಸ್ರಾರ್, ಫರ್ವೀಝ್, ಹಯಾಝ್ ಖಾನ್ ಹಾಗೂ ಊರಿನ ಸಮಸ್ತ ನಾಗರಿಕರು ಹಾಜರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.