ಜಿಲ್ಲಾ ಸುದ್ದಿ

ಆರೋಪಿಗಳಿಗೆ ಕಠಿಣ ಶಿಕ್ಷೆ: ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಒತ್ತಾಯ

 

ಜಾಹೀರಾತು

ಬಂಟ್ವಾಳ ತಾಲೂಕಿನ ಗೂಡಿನಬಳಿಯ ಮುಗ್ದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದ.ಕ.ಜಿಲ್ಲಾ ಎಸ್.ಸಿ. ಮೋರ್ಚಾ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ಒದಗಿಸಬೇಕು ಎಂದು ಒತ್ತಾಯಿಸಿದೆ.

ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ರಾಜ್ಯದ ಹಲವೆಡೆ ಇಂಥ ದುಷ್ಕೃತ್ಯಗಳು ನಡೆಯುತ್ತಿರುವ ಖೇದನೀಯ, ಮಂಡ್ಯ ಸಹಿತ ಹಲವೆಡೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಅದರಲ್ಲೂ ಬುದ್ಧಿವಂತರ ಜಿಲ್ಲೆ ಎನಿಸಿದ ದ.ಕ. ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಮಾನವ ಸಮಾಜ ತಲೆತಗ್ಗಿಸುವ ವಿಚಾರ ಎಂದು ಹೇಳಿದರು.

ಆರೋಪಿಗಳನ್ನು ಸಕಾಲದಲ್ಲಿ ಬಂದಿಸಿದ ಪೋಲಿಸ್ ಇಲಾಖೆಯನ್ನು ಅಭಿನಂದಿಸಿದ ಅವರು, ಜಿಲ್ಲೆಯಲ್ಲಿ ಭವಿಷ್ಯದಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕು ಎಂದು ಒತ್ತಾಯಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.