ಬಂಟ್ವಾಳ

ಬಾಲಕಿಗೆ ವೈದ್ಯಕೀಯ ವೆಚ್ಚ, ಕಾನೂನಿನ ರಕ್ಷಣೆ: ಬಿಜೆಪಿ ಯುವ ಮೋರ್ಚಾ ಒತ್ತಾಯ

ಬಂಟ್ವಾಳ ತಾಲೂಕಿನ ಗೂಡಿನಬಳಿಯ ಮುಗ್ದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಂಟ್ವಾಳ ಬಿಜೆಪಿ ಯುವಮೋರ್ಚಾವು ತೀವ್ರವಾಗಿ ಖಂಡಿಸಿದ್ದು, ದೌರ್ಜನ್ಯಕ್ಕೊಳಗಾದ ಬಾಲಕಿಗೆ ವೈದ್ಯಕೀಯ ವೆಚ್ಚ, ಕಾನೂನಿನ ರಕ್ಷಣೆ ಮತ್ತು ಗರಿಷ್ಠ ಪರಿಹಾರ ನೀಡಬೇಕು ಮತ್ತು ಇವರ ಬಿಡುಗಡೆಗೆ, ಜಾಮೀನಿಗೆ ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಪೋಲಿಸ್ ಇಲಾಖೆಯು ನಿಗಾ ಇಡಬೇಕಾಗಿ ಬಂಟ್ಟಾಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಆಗ್ರಹಿಸಿದ್ದಾರೆ.

ಆರೋಪಿಗಳನ್ನು ಸಕಾಲದಲ್ಲಿ ಬಂದಿಸಿದ ಪೋಲಿಸ್ ಇಲಾಖೆಯನ್ನು ಮತ್ತು ದೌರ್ಜನ್ಯದ ಗಂಭೀರತೆಯನ್ನು  ತೆರೆದಿಟ್ಟ ಆಸ್ಪತ್ರೆಯ ವೈದ್ಯರನ್ನು ಬಂಟ್ವಾಳ ಬಿಜೆಪಿ ಯುವಮೋರ್ಚಾ ಅಭಿನಂದಿಸಿದ್ದು, ಸರಕಾರ ಮತ್ತು ಪೋಲಿಸ್ ಇಲಾಖೆ ಈ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೋಲಾರದಲ್ಲಿ ನಡೆದ ವಿದ್ಯಾರ್ಥಿನಿ ಹತ್ಯೆ ಪ್ರಕರಣದಂತೆ 6 ತಿಂಗಳಿನ ಒಳಗೆ ತೀರ್ಪು ಬಂದು ಆರೋಪಿಗಳಿಗೆ ಕಠೀನಾತಿಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಬುದ್ದಿವಂತರ ಜಿಲ್ಲೆ ಎಂದು ಗುರುತಿಸಿಕೊಂಡಿರುವ ನಮ್ಮ ಜಿಲ್ಲೆಯಲ್ಲಿ ಭವಿಷ್ಯದಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಈ 8 ವರ್ಷದ ಮುಗ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳ ಪರವಾಗಿ ನ್ಯಾಯವಾದಿಗಳು ವಾದ ಮಾಡಬಾರದಾಗಿ ಗೌರವಾನ್ವಿತ ಬಾರ್ ಎಸೋಸಿಯೇಶನ್ ನನ್ನು ಬಂಟ್ವಾಳ ಬಿಜೆಪಿ ಯುವಮೋರ್ಚಾವು ವಿನಂತಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ