ಜುಲಾಯಿ ಹಾಗೂ ಆಗಸ್ಟ್ ತಿಂಗಳ ಗೌರವಧನವನ್ನು ಶೀಘ್ರವೇ ಪಾವತಿಸದಿದ್ದಲ್ಲಿ ಅಂಗನವಾಡಿ ಬಂದ್ ಗೊಳಿಸಿ ಮುಷ್ಕರ ನಡೆಸಲು ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಎಚ್ಚರಿಸಿದೆ.
ಜುಲೈ ಹಾಗೂ ಆಗಸ್ಟ್ ತಿಂಗಳ ಗೌರವಧನ ಪಾವತಿಯಾಗದೇ ಇರುವುದರಿಂದ ಅತ್ಯಲ್ಪ ಗೌರವಧನದಲ್ಲಿ ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಸಮಯಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದರೂ ಸಮಸ್ಯೆಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಸೆಪ್ಟೆಂಬರ್ 25 ತಾರೀಖಿನೊಳಗೆ ಬ್ಯಾಂಕ್ ಖಾತೆಗೆ ಗೌರವ ಧನ ಜಮಾ ಆಗದಿದ್ದರೆ ಮಾಸಿಕ ವರದಿ ಸಲ್ಲಿಕೆಯನ್ನು ತಡೆ ಹಿಡಿಯಲು ನಿರ್ಧರಿಸುವುದಾಗಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸೆ. 24ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಕುಂದು ಕೊರತೆ ನಿವರಣ ಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು ಮುಂದಿನ ಅಕ್ಟೋಬರ್ 5 ನೇ ತಾರೀಖಿನೊಳಗೆ ಬಾಕಿಯಿರುವ ಎಲ್ಲಾ ಗೌರವಧನ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬ್ಯಾಂಕ್ ಖಾತೆಗೆ ಜಮೆಯಾಗದಿದ್ದಲ್ಲಿ ಅಂಗನವಾಡಿಗಳನ್ನು ಬಂದ್ಗೊಳಿಸಿ ಮುಷ್ಕರ ಆರಂಭಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)