ಬಂಟ್ವಾಳ

ಮೀಸಲಾತಿಯೇ ಇಲ್ಲದಿರುವಾಗ ಜಾತಿ ಪ್ರಮಾಣಪತ್ರ ಯಾಕೆ?

ಕುಡಾಲ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ್ ಸಮಾಜದವರು ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ವಾಸಿಸುತ್ತಿದ್ದು, ಸಮಾಜದ ಮಕ್ಕಳಿಗೆ ಶಾಲಾ ದಾಖಲಾತಿ, ವಿದ್ಯಾರ್ಥಿ ವೇತನ ವಿತರಣೆ ಸಂದರ್ಭ ಜಾತಿ ಪ್ರಮಾಣಪತ್ರವನ್ನು ತರಬೇಕು ಎಂದು ಹೇಳುವುದು ತಮ್ಮ ಗಮನಕ್ಕೆ ಬಂದಿದೆ. ಮೀಸಲಾತಿಯೇ ಇಲ್ಲದಿರುವಾಗ ಸಾಮಾನ್ಯ ವರ್ಗಕ್ಕೆ ಜಾತಿ ಪ್ರಮಾಣಪತ್ರ ಕೊಡುವ ಅಗತ್ಯ ಇಲ್ಲವಾಗಿದ್ದು ಈ ಕುರಿತು ಸರಕಾರ ಗಮನಹರಿಸಬೇಕು ಎಂದು ಕುಡಾ ದೇಶಸ್ಥ ಗೌಡ್ ಬ್ರಾಹ್ಮಣ ಸಂಘ ಜಿಲ್ಲಾ ಸಮಿತಿ ಹೇಳಿದೆ.

ಜಾಹೀರಾತು


ಬಂಟ್ವಾಳ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಡೆಚ್ಚ ಗಣಪತಿ ಶೆಣೈ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಸಮಾಜ ಬಾಂಧವರು ಅನಗತ್ಯ ಗೊಂದಲಕ್ಕೆ ಈಡಾಗಬಾರದು, ಮೀಸಲಾತಿಯೇ ಇಲ್ಲದಿರುವಾಗ ಸಾಮಾನ್ಯ ವರ್ಗಕ್ಕೆ ಜಾತಿ ಪ್ರಮಾಣಪತ್ರ ಕೊಡುವ ನಿಮಯ ಇಲ್ಲವೆಂದು ಕಂದಾಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ಜಾತಿ ಕಲಂನಲ್ಲಿ ಕುಡಾಲ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಾಮಾನ್ಯ ವರ್ಗ ಎಂದು ನಮೂದಿಸಬೇಕು ಎಂದು ಅವರು ಸಮಾಜ ಬಾಂಧವರಿಗೆ ಮನವಿ ಮಾಡಿದರು.
ಕಾರ್ಯದರ್ಶಿ ಪೂರ್ಲಿಪ್ಪಾಡಿ ವೆಂಕಟ್ರಾಯ ಪ್ರಭು, ಪ್ರಮುಖರಾದ ಮುರಳೀಧರ ಪ್ರಭು ವಗ್ಗ, ಪ್ರಭಾಕರ ಪ್ರಭು, ಜಗದೀಶ ಶೆಣೈ, ರಾಮಗಣೇಶ ಪ್ರಭು ಕೈಕುಂಜೆ, ಶಿವರಾವ್ ನಾಯಕ್ ನೆಕ್ಕಿಲಾರು, ಜಯಪಾಲ ಪ್ರಭು ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ