ಬಂಟ್ವಾಳ

ಪಡಿತರ ಅಂಗಡಿಗಳ ಸರ್ವರ್ ಸಮಸ್ಯೆ ನಿವಾರಣೆಗೆ ಕ್ರಮ: ತಹಶೀಲ್ದಾರ್

ಗ್ರಾಮಾಂತರ ಭಾಗದ ಪಡಿತರ ಅಂಗಡಿಗಳಲ್ಲಿ ಉಂಟಾಗಿರುವ ಸರ್ವರ್ ಸಮಸ್ಯೆಯಿಂದಾಗಿ ಕಾರ್ಡುದಾರರು ಪಡಿತರ ಅಕ್ಕಿಗಾಗಿ ಅಲೆಯುವಂತಹ ಸಮಸ್ಯೆಗಳನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಜನ ಶಿಕ್ಷಣ ಟ್ರಸ್ಟ್, ದಿ ಹಂಗರ್ ಪ್ರೋಜೆಕ್ಟ್, ಸುಗ್ರಾಮ ಸಂಘದ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ಸುಗ್ರಾಮ ಸಂವಾದದಲ್ಲಿ ಭಾಗವಹಿಸಿ ಆಹಾರ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು ಸೂಚಿಸಿದರು. ಮಹಾತ್ಮಾ ಗಾಂಧೀ ನರೇಗಾ ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮ, ತಾಲೂಕು ಪಂಚಾಯತ್ ಅಧಿಕಾರಿ ಅಶೋಕ್, ಮಹಾತ್ಮ ಗಾಂಧೀ ನರೇಗಾ ಮಾಜಿ ಓಂಬುಡ್ಸ್ಮೆನ್ ಶೀನ ಶೆಟ್ಟಿ, ಮಹಾತ್ಮಾ ಗಾಂಧೀ ನರೇಗಾ, ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖಾ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಆಲಿಸಿ ಪರಿಹಾರೋಪಾಯಗಳನ್ನು ಸೂಚಿಸಿ ಸಂವಾದ ನಡೆಸಿದರು. ಸುಗ್ರಾಮ ಅಧ್ಯಕ್ಷೆ ದಾಕ್ಷಾಯಿಣಿ ಸೇರಿದಂತೆ ೧೩ ಪಂಚಾಯತ್ಗಳ ೩೧ ಮಂದಿ ಸದಸ್ಯೆಯರು ಭಾಗವಹಿಸಿದ್ದರು. ಸಂಯೋಜಕರಾದ ಚೇತನ್ ಕುಮಾರ್ ಸಂವಾದ ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾವೇರಿ, ಪದ್ಮಿನಿ ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ