ತಮ್ಮಯ ಸಾಧನೆ ಅನುಕರಣೀಯ: ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ

Report: .ಗೋಪಾಲ ಅಂಚನ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಹಿರಿಯ ಸಾಹಿತಿ, ಸಂಘಟಕ ಹಾಗೂ ತುಳು ಲಿಪಿ ಶಿಕ್ಷಕರಾದ ಬಿ.ತಮ್ಮಯ ಅವರಿಗೆ ಅಕಾಡೆಮಿಯ ತುಳುಭವನದಸಿರಿ ಚಾವಡಿಯಲ್ಲಿಚಾವಡಿ ತಮ್ಮನಪ್ರದಾನ ಮಾಡಿ ಗೌರವಿಸಲಾಯಿತು.

ಜಾಹೀರಾತು

ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿ ಮಾತನಾಡಿ, ಬಿ.ತಮ್ಮಯ ಅವರು ಸಾಹಿತಿ, ಸಂಘಟಕರರಾಗಿ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಜತೆಯಲ್ಲಿ ಅವರು ಅಪ್ಪಟ ಮಾನವತಾವಾದಿಯಾಗಿ ಪ್ರೀತಿ, ಭಾಂದವ್ಯದ ಸಮಾಜ ಕಟ್ಟುವಲ್ಲಿಯೂ ಶ್ರಮಿಸಿದವರು. ಇಳಿವಯಸ್ಸಿನಲ್ಲೂ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಅನುಕರಣೀಯವಾದುದು ಎಂದರು.

ಅಕಾಡೆಮಿ ಅಧ್ಯಕ್ಷ .ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರನ್ನು ಗುರುತಿಸಿ  “ಚಾವಡಿ ತಮ್ಮನಮಾಡಿ ಗೌರವಿಸುವ ಕಾರ್ಯವನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಾರಿ ಅರ್ಹವಾಗಿಯೇ ಬಿ.ತಮ್ಮಯ ಅವರು ಆಯ್ಕೆಯಾಗಿದ್ದು ಸಾಹಿತ್ಯ ಕ್ಷೇತ್ರದ ಸೇವೆಯ ಜತೆಗೆ ತುಳು ಲಿಪಿಯ ಶಿಕ್ಷಕರಾಗಿಯೂ ತುಳು ಭಾಷಾ ಬೆಳವಣಿಗೆಗೆ ಅವರು ನೀಡಿದ ಸೇವೆ ಮಾದರಿಯಾದುದು ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಟಿ.ಹೆಬ್ಬಾರ್ ಬಿ.ತಮ್ಮಯರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ತಮ್ಮಯ ಅವರದು ಸದಾ ಕ್ರಿಯಾಶೀಲ ವ್ಯಕ್ತಿತ್ವ. ವೃತ್ತಿ ಬದುಕಿನ ನಡುವೆಯೇ ಸಾಹಿತ್ಯಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು ನಿವೃತ್ತಿಯ ನಂತರವೂ ಸೃಜನಾಶೀಲ ಚಟುವಟಿಕೆಯೊಂದಿಗೆ ಜನಮಾನಸದ ಪ್ರೀತಿ ಗೌರವಾದರಗಳಿಗೆ ಪಾತ್ರರಾದವರು ಎಂದರು.

ಕಾರ್ಯಕ್ರಮದ ಸದಸ್ಯ ಸಂಚಾಲಕ .ಗೋಪಾಲ ಅಂಚನ್ ಸ್ವಾಗತಿಸಿದರು. ಅಕಾಡೆಮಿ ಸದಸ್ಯರಾದ ತಾರಾನಾಥ ಗಟ್ಟಿ ಕಾಪಿಕಾಡು ನಿರೂಪಿಸಿ ಸುಧಾ ನಾಗೇಶ್ ವಂದಿಸಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಸದಸ್ಯರಾದ ಡಾ.ವಾಸುದೇವ ಬೆಳ್ಳೆ, ಶಿವಾನಂದ ಕರ್ಕೆರಾ, ಬೆನೆಟ್ ಅಮ್ಮಣ್ಣ, ವಿಜಯಾ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಜೀವನದಲ್ಲೇ ನಾಟಕ, ಯಕ್ಷಗಾನ, ತಾಳಮದ್ದಳೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಬಿ.ತಮ್ಮಯ ಅವರು ನಾನಾ ಕಡೆಗಳಲ್ಲಿ ಸಂಘಟನೆಗಳನ್ನು ಸ್ಥಾಪಿಸಿ ತುಳು ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸಿ ಪ್ರದರ್ಶಿಸಿದವರು. ಕಂದಾಯ ಇಲಾಖೆಯಲ್ಲಿ ವೃತ್ತಿ ಬದುಕಿನ ನಡುವೆಯೇ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡ ಇವರು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿಅಧ್ಯಕ್ಷರಾಗಿ, ಯುವವಾಹಿನಿಯ ಸಲಹೆಗಾರರಾಗಿ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಪ್ರಸ್ತುತತುಳುವೆತುಳುಲಿಪಿ ಪತ್ರಿಕೆಯ ಸಂಪಾದಕರಾಗಿ, ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ, ..ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿಯಾಗಿರುವ ಇವರು ಹಣತೆ, ನಾರಾಯಣ ಗುರು ಭಜನೆ, ಚಿಂತನ ಮಂಥನ, ಹಿಂದಿರುಗಿ ನೋಡಿದಾಗ, ಕರಿಕೋಟು, ಕಾಡಿನ ಹಕ್ಕಿ ಹಾಡಿತು, ತಟಪಟ ಹನಿ, ತುಳುವೆರೆ ಪರ್ಬ, ತುಳು ಲಿಪಿ ಕಲ್ಪಿತುಳು ಮೊದಲಾದ ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಹಲವಾರು ಶಾಲಾ ಕಾಲೇಜು ಮತ್ತು ಸಂಘಟನೆಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಲಿಪಿ ಕಲಿಸುವ ಮೂಲಕತುಳು ಮಾಸ್ತರ್ಎನಿಸಿಕೊಂಡಿದ್ದಾರೆ

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ತಮ್ಮಯ ಸಾಧನೆ ಅನುಕರಣೀಯ: ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*