ಬಂಟ್ವಾಳ

ಗ್ರಾಮೀಣ ಮಹಿಳೆಯರು ಜಾಗೃತರಾದರೆ ಯೋಜನೆ ಯಶಸ್ವಿ: ಚಂದ್ರಹಾಸ ಕರ್ಕೇರ

ಸರಕಾರದ ಯೋಜನೆಗಳು ಮತ್ತು ಯೋಚನೆಗಳು ಯಶಸ್ವಿಗೊಳಿಸಲು ಗ್ರಾಮೀಣ ಮಹಿಳೆಯರು ಜಾಗೃತರಾಗಿ ಸ್ವಾವಲಂಬಿಗಳಾಗುವುದು ಅಗತ್ಯ ಎಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಸದಸ್ಯೆ ಮಮತಾ ಗಟ್ಟಿ, ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ಮೊದಲಾದವರು ಇದ್ದರು.

ತಾಲೂಕು ಪಂಚಾಯತ್, ಬಂಟ್ವಾಳ, ಇರಾ ಗ್ರಾಮ ಪಂಚಾಯತ್ ಮತ್ತು  ಮಹಿಳಾ ಹಾಗೂ ಮಕ್ಕಳ ಅಭಿವೃದ್ದಿ ಇಲಾಖೆ ವಿಟ್ಲ ವಲಯ ಇದರ ಜಂಟಿ ಆಶ್ರಯದಲ್ಲಿ ಮಹಿಳಾ ಗ್ರಾಮ ಸಭೆ ರಾಷ್ಟ್ರೀಯ ಪೌಷ್ಟಿಕ ಆಹಾರ ಮಾಸಾಚರಣೆ ಹಾಗೂ ಸಂಜೀವಿನಿ ಪಂಚಾಯತ್ ಒಕ್ಕೂಟರಚನಾ ಕಾರ್ಯಕ್ರಮವು ಇಂದು ಮಳಯಾಳಿ ಬಿಲ್ಲವ ಸಂಘ (ರಿ)ಇರಾ ದಲ್ಲಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ  ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ಕೇರ, ಗ್ರಾಮೀಣಾ ಪ್ರಧೇಶಗಳ ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಾಗ ಸರಕಾರದ ಯೋಜನೆಗಳು ಹಾಗೂ ಯೋಚನೆಗಳು ಯಶಸ್ವಿಗೊಳ್ಳುವುದರಲ್ಲಿ ಸಂಶಯವಿಲ್ಲ. ಆದುದರಿಂದ ಮುಂದಿನ ದಿನಗಳಲ್ಲಿ ಮಹಿಳೆಯರು ಜಾಗೃತರಾಗುವಂತೆ ಕರೆ ನೀಡಿದರು.

ಮುಖ್ಯ ಆತಿಥಿಗಳಾಗಿ ಪಾಲ್ಗೊಂಡ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತ ಡಿ ಎಸ್ ಗಟ್ಟಿ, ಜಗತ್ತಿನಲ್ಲಿ ಪ್ರಮುಖ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಮಹಿಳಾ ನಾಯಕಿಯರ ಆದರ್ಶಗುಣಗಳನ್ನು ಮೈಗೂಡಿಸಿಕೊಂಡು ಸರಕಾರದ ಯೋಜನೆಗಳ ಚಿಂತನೆಗಳೊಂದಿಗೆ ಗ್ರಾಮೀಣ ಮಹಿಳೆಯರು ಸಶಕ್ತರಾಗುವಂತೆ ಕರೆ ನೀಡಿದರು.

ಸಂಜೀವಿ ಪಂಚಾಯತ್ ಒಕ್ಕೂಟ ರಚನೆ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕರಾದ ಪ್ರಶಾಂತ್ ಬಳಂಜ ಮಾತನಾಡಿ, ಸರಕಾರದ ಪ್ರತಿಯೊಂದು ಯೋಜನೆಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿದ್ದು,ಇಂದಿನ ದಿನಗಳಲ್ಲಿ ಸಂಜೀವಿನಿ ಪಂಚಾಯತ್ ಒಕ್ಕೂಟಗಳ ಮೂಲಕ ಮಹಿಳೆಯರು ಗ್ರಾಮಾಭಿವೃದ್ದಿಯಲ್ಲಿ ತೊಡಗಿಸಿಕೊಳ್ಳವಂತೆ ಕರೆ ನೀಡಿದರು.

ಇದೇ ಸಂರ್ಭದಲ್ಲಿ :ಸ್ಚಚ್ತತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಗುಣವತಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಎಂ ಬಿ ಉಮ್ಮರ್ ಗೋಪಾಲ ಅಶ್ವತ್ತಡಿ ದೇವದಾಸ ಅಡಪ ಮೊಹಿದಿನ್ ಕುಂಞ, ಪಾರ್ವತಿ ,ತುಳಸಿ, ಸಾಂತ್ವನ ಕೇಂದ್ರ ಸಮಾಜ ಸೇವಕ ಪ್ರಶಾಂತ್ ಚೌಕದಪಾಲು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ ಕೆ ಸ್ವಾಗತಿಸಿ ಪಂಚಾಯತ್ ಗುಮಾಸ್ತೆ ಗುಲಾಬಿಯವರು ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.