ಪುರಸಭೆ ಕಟ್ಟಡದಲ್ಲಿ ಬಕೆಟ್ ರಾಶಿ: ತತ್ ಕ್ಷಣ ವಿಲೇವಾರಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ಪುರಸಭೆಯ ಹಳೇ ಕಟ್ಟಡದಲ್ಲಿ ಕಸ ವಿಲೇವಾರಿಗೆ ಮನೆ ಮನೆಗಳಿಗೆ ಹಂಚಲೆಂದು ದಾಸ್ತಾನಿರಿಸಲಾದ ಬಕೆಟ್ ಗಳು, ಹಾಗೂ ಉಪಯೋಗಿಸಲ್ಪಟ್ಟ ಟ್ಯೂಬ್ ಲೈಟ್ ಮತ್ತು ಇತರ ವಸ್ತುಗಳ ರಾಶಿಯನ್ನು ಸೋಮವಾರ ಮಧ್ಯಾಹ್ನ ಪರಿಶೀಲಸಿದ ರಾಜೇಶ್ ನಾಯ್ಕ್, ತಕ್ಷಣ ವಿಲೇವಾರಿ ನಡೆಸಲು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಅವರಿಗೆ ಸೂಚಿಸಿದ್ದಾರೆ.

ಜಾಹೀರಾತು

ಪುರಸಭೆಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ತೆರಳುವ ಮುನ್ನ ಹಳೇ ಕಟ್ಟಡದ ದಾಸ್ತಾನನ್ನು ಶಾಸಕ ಪರಿಶೀಲಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಪುರಸಭೆಯ ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಸ್ವಚ್ಛತಾ ಕಾರ್ಯಕ್ರಮಗಳನ್ನು ಬಂಟ್ವಾಳ ಪುರಸಭೆಯ ವ್ಯಾಪ್ತಿಯಾದ್ಯಂತ ನಡೆಸುತ್ತಿರುವ ಬಂಟ್ವಾಳ ಪುರಸಭೆಯ ಒಳಗೇ ವಿಲೇವಾರಿಯಾಗದ ವೇಸ್ಟ್ ಗಳ ರಾಶಿ ಇದೆ. ಇದನ್ನು ಮೊದಲು ವಿಲೇವಾರಿ ಮಾಡದೆ ಉಳಿದೆಡೆ ಸ್ವಚ್ಛತಾ ಜಾಥಾ, ಕಾರ್ಯಕ್ರಮಗಳನ್ನು ಮಾಡಿ ಏನು ಪ್ರಯೋಜನ, ಊರವರಿಗೆ ತ್ಯಾಜ್ಯ ವಿಲೇವಾರಿ ಮಾಡುವುದನ್ನು ಹೇಳುವ ಬದಲು ಪುರಸಭೆಯೇ ನಾಗರಿಕರಿಗೆ ಬಕೆಟ್ ಕೊಡುವ ಕಾರ್ಯವನ್ನು ನಡೆಸಿಲ್ಲ ಎಂದು ಗಮನ ಸೆಳೆದರು.

ಈ ಸಂದರ್ಭ ಮುಖ್ಯಾಧಿಕಾರಿಯನ್ನು ಪ್ರಶ್ನಿಸಿದ ಶಾಸಕರು, ಇಷ್ಟು ಸಮಯ ಯಾಕೆ ಬಕೆಟ್ ಗಳನ್ನು ವಿಲೇವಾರಿ ಮಾಡದೆ ಹಾಗೆಯೇ ಉಳಿಸಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲಿದ್ದ ಟ್ಯೂಬ್ ಲೈಟ್, ಬಾಟಲಿಗಳು ಹಾಗೂ ಇನ್ನಿತರೆ ವಸ್ತುಗಳನ್ನು ನೋಡಿದ ಶಾಸಕರು, ಇದನ್ನೆಲ್ಲ ಯಾವಾಗ ವಿಲೇವಾರಿ ಮಾಡುತ್ತೀರಿ ಎಂದು ಪ್ರಶ್ನಿಸಿ, ಹೀಗೆ ಮಾಡಿದರೆ ಪುರಸಭೆ ಮಾದರಿಯಾಗಿರಲು ಹೇಗೆ ಸಾಧ್ಯ, ಹಳೇ ವಸ್ತುಗಳನ್ನು ಶೀಘ್ರ ವಿಲೇವಾರಿ ಮಾಡಿ, ಬಕೆಟ್ ಗಳನ್ನು ಸಾರ್ವಜನಿಕರಿಗೆ ಒದಗಿಸುವ ಕಾರ್ಯ ನಡೆಸಿ ಎಂದು ಸೂಚಿಸಿದರು.

ಜಾಹೀರಾತು

ಈ ಸಂದರ್ಭ ಉತ್ತರಿಸಿದ ಮುಖ್ಯಾಧಿಕಾರಿ ಹೊಸ ಕೊಠಡಿ ನಿರ್ಮಾಣಕ್ಕೆ ಅನುದಾನ ಇಡಲಾಗಿದ್ದು, ಚುನಾವಣೆ ಬಂದ ಕಾರಣ ಕೆಲಸ ಆರಂಭವಾಗಿಲ್ಲ. ಉಪಯೋಗಿಸಿ ಹಾಳಾಗಿ ದಾಸ್ತಾನಿರಿಸಲಾದ ವಸ್ತುಗಳನ್ನು ಟೆಂಡರ್ ಮೂಲಕ ವಿಲೇವಾರಿ ಮಾಡುತ್ತೇವೆ ಎಂದು ಉತ್ತರಿಸಿದರು. ಸಭೆಯಲ್ಲಿ 600 ಬಕೆಟ್ ಗಳು ವಿತರಣೆಯಾಗದೆ ಉಳಿದಿವೆ ಎಂದಿದ್ದೀರಿ ಆದರೆ ಇಲ್ಲಿ ಅದಕ್ಕಿಂತಲೂ ಜಾಸ್ತಿ ಇದ್ದು ನಾಗರಿಕರಿಗೆ ನಿಜ ಅರ್ಥದ ಸೇವೆಯನ್ನು ಕೈಗೊಳ್ಳುವ ಮೂಲಕ ಆಡಳಿತ ಯಂತ್ರ ಮಾದರಿಯಾಗಿರಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಪುರಸಭೆ ಮುಖ್ಯಾಧಿಕಾರಿಗೆ ತಿಳಿಸಿದರು. ಈ ಸಂದರ್ಭ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಇದ್ದರು.

ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟು, ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಾ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುರಸಭೆ ಕಟ್ಟಡದಲ್ಲಿ ಬಕೆಟ್ ರಾಶಿ: ತತ್ ಕ್ಷಣ ವಿಲೇವಾರಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*