ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟು, ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಾ

  • ಬಂಟ್ವಾಳ ಪುರಸಭೆ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಸೂಚನೆ

www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಆಯ್ದ ಜಾಗಗಳಲ್ಲಿ  ಅತ್ಯಾಧುನಿಕ ಸಿಸಿ ಕ್ಯಾಮರಾ ಅಳವಡಿಸಿ, ನೀರಿನ ಸಮಸ್ಯೆಗಳು ಬಾರದಂತೆ ಎಚ್ಚರವಹಿಸಿ, ಸುಂದರ ಬಂಟ್ವಾಳ ನಿರ್ಮಾಣಕ್ಕೆ ಸಹಕರಿಸಿ.

ಇದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸೋಮವಾರ ಬಂಟ್ವಾಳ ಪುರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ನೀಡಿದ ಸೂಚನೆ.ಕೆಲವೊಂದು ವಿಷಯಗಳಲ್ಲಿ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಯಾವ ಮುಲಾಜಿಲ್ಲದೆ ಕೈಗೊಳ್ಳಬೇಕು, ಯಾವುದೇ ಒತ್ತಡಗಳಿಗೆ ಮಣಿಯುವ ಅಗತ್ಯವಿಲ್ಲ ಎಂದು ಕ್ಲಾಸ್ ಮಾಡಿದ ಶಾಸಕರು, ತ್ಯಾಜ್ಯ ವಿಲೇವಾರಿ, ಒಳಚರಂಡಿ ವ್ಯವಸ್ಥೆಗಳು ಇನ್ನೂ ಆಗಿಲ್ಲದೇ ಇರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳಿಗೆ ಚುರುಕುಮುಟ್ಟಿಸಿದರು.ಫ್ಲೆಕ್ಸ್, ಬಂಟಿಂಗ್ಸ್ ಗಳನ್ನು ಬಳಸಲು ಅವಕಾಶ ನೀಡಬೇಡಿ, ರಾಷ್ಟ್ರೀಯ ಹೆದ್ದಾರಿಯ ಬಸ್ ತಂಗುದಾಣಗಳಲ್ಲಿ ಅಳವಡಿಸಿರುವ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಿ ಎಂದ ಶಾಸಕರು, ತನ್ನನ್ನು ಅಭಿನಂದಿಸಿದ ಫ್ಲೆಕ್ಸ್ ಇದ್ದರೂ ತೆರವುಗೊಳಿಸಿ, ಯಾವ ಮುಲಾಜೂ ಬೇಡ ಎಂದರು.

ಸಭೆಯ ಮುಖ್ಯಾಂಶಗಳು ಇವು.

  • ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ನಳ್ಳಿ, ದಾರಿದೀಪಗಳಿವೆ ಎಂದು ಅಧಿಕಾರಿಗಳಿಂದ ಮಾಹಿತಿ. ಪುರಸಭೆ ಸರ್ವೆ ಪ್ರಕಾರ 570 ಎಂದು ಮುಖ್ಯಾಧಿಕಾರಿ ಹೇಳಿದರೆ ಅದಕ್ಕಿಂತಲೂ ಜಾಸ್ತಿ ಇವೆ ಎಂದರು ಶಾಸಕ ರಾಜೇಶ್ ನಾಯ್ಕ್.
  • ಎರಡನೇ ಹಂತದ ಕುಡಿಯುವ ನೀರಿನ ಯೋಜನೆಯಲ್ಲಿ 90 ಕಿ.ಮೀ ಪೈಕಿ, 85 ಕಿ.ಮೀ.ಪೈಪ್ ಲೈನ್ ಪೂರ್ಣಗೊಂಡಿದ್ದು, 5040 ನೀರಿನ ಸಂಪರ್ಕ ನೀಡಲಾಗುತ್ತಿದೆ ಎಂದು ಕೆಯುಡಬ್ಲ್ಯ ಎಸ್ ಶೋಭಾಲಕ್ಮ್ಮಿ ಮಾಹಿತಿ.
  • ಅನಧಿಕೃತ ಸಂಪರ್ಕ ಪಡೆಯದಂತೆ ತಂತ್ರಜ್ಞಾನ ಅಳವಡಿಸಲು ಶಾಸಕ ಸೂಚನೆ.
  • ಪುರಸಭಾ ವ್ಯಾಪ್ತಿಯಲ್ಲು ಸಾಕಷ್ಟ ಅನಧಿಕೃತ ದಾರಿದೀಪಗಳು ಉರಿಯುತ್ತಿರುವ ಬಗ್ಗೆ ಸಭೆಯಗಮನ ಸೆಳೆದರಲ್ಲದೆ 2.77 ಕೋ.ರೂ.ವಿದ್ಯುತ್ ಬಿಲ್ಲು  ಪಾವತಿಸಲು ಪುರಸಭೆ ಬಾಕಿ ಇಟ್ಟಿರುವ ಬಗ್ಗೆ ಮೆಸ್ಕಾಂ ಇಂಜಿನಿಯರ್ ಮಾಹಿತಿ
  • ನೀರಿನ ಸಮಸ್ಯೆಯ ಬಗ್ಗೆ ದೂರು ಬರುತ್ತಿದ್ದು,ಈಗಾಗಲೇ ಎರಡು ಪ್ರದೇಶಕ್ಕೆ ತಾನೇ ಟ್ಯಾಂಕರ್ ಪೂರೈಸುವ ವ್ಯವಸ್ಥೆ ಮಾಡಿದ್ದು ಇನ್ನು ಮುಂದೆ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸುವಂತೆ ಶಾಸಕ ಸೂಚನೆ,
  • ಕಂಚಿನಡ್ಕ ಪದವಿನ ತ್ಯಾಜ್ಯ ವಿಲೇವಾರಿ ಘಟಕದ ಸುತ್ತ ಇರುವ ಮನೆಗಳನ್ನು ಸ್ಥಳಾಂತರಿಸಲು ಇರಾ ಗ್ರಾಮದಲ್ಲಿ ಜಮೀನು ಗುರುತಿಸಲಾಗಿದೆ.ಅಲ್ಲಿ  ಪೈರೋಲಿಸಿಸ್ ಯಂತ್ರ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ‌. ಕಸವಿಲೇವಾರಿಯ ಗುತ್ತಿಗೆದಾರನ ಅವಧಿ ಈಗಾಗಲೇ ಪೂರ್ಣಗೊಂಡಿದೆ  ಮುಖ್ಯಾಧಿಕಾರಿ ರೇಖಾ ಶೆಟ್ಟಿ ಮಾಹಿತಿ.
  • ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಯಕಟ್ಟಿನ ಏಳು ಕಡೆಗಳಲ್ಲಿ ಸಿಸಿ ಕ್ಯಾಮಾರ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಎಸ್ ಹರೀಶ್ ಮನವಿ ನೀಡಿದಾಗ ಸಿಸಿ ಕ್ಯಾಮರ ಅಳವಡಿಸುವ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರರ್ವತವಾಗುವಂತೆ ಶಾಸಕ ಸೂಚನೆ, ಇದಕ್ಕೆ ಗುಣಮಟ್ಟದ ಸಿಸಿ ಕ್ಯಾಮಾರವನ್ನೇ ಅಳವಡಿಸಲು ಸೂಚನೆ.
  • ಟ್ರಾಫಿಕ್, ಪಾರ್ಕಿಂಗ್ ಬಗ್ಗೆ ಸ್ಥಳ ಪರಿಶೀಲನೆಗೆ ಶಾಸಕ ಸೂಚನೆ. ಎಸ್.. ಮಂಜುಳಾ ಕುರಿತು ಗಮನ ಸೆಳೆದರು.

ಉಪಸ್ಥಿತಿ:

ಮಂಗಳೂರು ಸಹಾಯಕ ಕಮೀಷನರ್ ಹಾಗೂ ಪುರಸಭೆಯ ಆಡಳಿತಾಧಿಕಾರಿ ರವಿಚಂದ್ರ  ನಾಯಕ್ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಕೆಯುಡಬ್ಲ್ಯ ಎಸ್ ನಿಂಜಿನಿಯರ್ ಗಳಾದ ಜಗದೀಶ್, ಸಂಶುದ್ದೀನ್, ಶೋಭಾಲಕ್ಷ್ಮೀ, ಮೆಸ್ಕಾಂ ಎಇಇ ನಾರಾಯಣ ಭಟ್, ಪುರಸಭೆಯ ಕಿರಿಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊಅರಣ್ಯಾಧಿಕಾರಿ ಬಿ.ಸುರೇಶ್ ಪುರಸಭೆಯ ಅಧಿಕಾರಿಗಳು ಹಾಜರಿದ್ದರು.ಮುಖ್ಯಾಧಿಕಾರಿ ರೇಖಾ ಶೆಟ್ಟಿ ಸ್ವಾಗತಿಸಿ,ವಂದಿಸಿದರು.

ಪುರಸಭೆ ಕಟ್ಟಡದಲ್ಲಿ ಬಕೆಟ್ ರಾಶಿ: ತತ್ ಕ್ಷಣ ವಿಲೇವಾರಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟು, ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*