ಬಂಟ್ವಾಳ

ಶರತ್ ಮಡಿವಾಳ ನೆನಪಿಗೆ ಹೈಮಾಸ್ಕ್ ದೀಪ ಸೌಲಭ್ಯ: ಕೋಟ ಶ್ರೀನಿವಾಸ ಪೂಜಾರಿ

ವಿಧಾನಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅನುದಾನದಲ್ಲಿ ಸಜಿಪಮೂಡ ಗ್ರಾಮದ ಕಂದೂರಿನಲ್ಲಿ ಹಾಕಲಾದ ಹೈಮಾಸ್ಕ್ ದೀಪವನ್ನು ಬುಧವಾರ ಸಂಜೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿಯವರು ಲೋಕಾರ್ಪಣೆಗೈದರು.

ಜಾಹೀರಾತು

ಬಳಿಕ ಸ್ಥಳೀಯ  ಯುವಕ ಸಂಘದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ದಿ. ಶರತ್ ಮಡಿವಾಳರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶರತ್ ನೆನಪಿಗಾಗಿ ನನ್ನ ಅನುದಾನದಲ್ಲಿ ಹೈಮಾಸ್ಕ್  ದೀಪ ಅಳವಡಿಕೆಗೆ ನಿರ್ಧರಿಸಿದ್ದೆ ಆ ಮೂಲಕ ಕತ್ತಲಲ್ಲಿರುವ ಈ ಭಾಗದಲ್ಲಿ ಹೊಸ ಬೆಳಕನ್ನು ಮೂಡಿಸುವ ಪ್ರಯತ್ನವಾಗಿ ಈ ದಿನ ಹೈಮಾಸ್ಕ್ ದೀಪವನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ  ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಸಜಿಪಮುನ್ನೂರು ಮತ್ತು ಸಜಿಪಮೂಡ ಗ್ರಾಮದ ಅಭಿವೃದ್ಧಿಗಾಗಿ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಭರವಸೆಯಿತ್ರರು.

ಬಿಜೆಪಿ ಬಂಟ್ವಾಳ ಕ್ಷೇತ್ರ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ,ಬಂಟ್ವಾಳ ತಾಲೂಕು ಪಂಚಾಯಿತ್ ನ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಸಜಿಪಮೂಡ ಗ್ರಾಮ ಪಂಚಾಯಿತ್ ನ ಅಧ್ಯಕ್ಷ ವಿಶ್ವನಾಥ ಬೆಳ್ಚಡ ,  ತಾಲೂಕು ಪಂಚಾಯತ್  ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಸಜಿಪಮೂಡ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಹಿರಿಯರಾದ ತನಿಯಪ್ಪ ಮಡಿವಾಳ, ಮೋಹನ್ ಪಿ.ಎಸ್, ಶ್ರೀನಾಥ್ ಶೆಟ್ಟಿ, ಸೀತಾರಾಮ ಅಗಳಿಬೆಟ್ಟು, ನವೀನ್ ಅಂಚನ್, ಸುಮತಿ ಗಿರಿಜಾ ನಾಯಕ್, ವೀರೇಂದ್ರ ಕುಲಾಲ್, ಎನ್ ಕೆ ಶಿವ,ಇದಿನಬ್ಬ ನಂದಾವರ, ಪ್ರವೀಣ ಗಟ್ಟಿ, ರೂಪೇಶ್ ಆಚಾರ್ಯ, ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು,ಬಿಜೆಪಿ  ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುರೇಶ್ ಶೆಟ್ಟಿ ಕೋಯ ಮಜಲು, ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ದಯಾನಂದ ಬಿ.ಎಂ, ಪ್ರಮೀಳಾ ಗಣೇಶ್, ಯಶವಂತ ನಗ್ರಿ ,ಸುರೇಶ್ ಕೋಟ್ಯಾನ್ ನರಿಕೊಂಬು ,ಮನೋಜ್ ತುಂಬೆ,ಬಾಲಕೃಷ್ಣ ಸೆರ್ಕಳ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago