ಬಂಟ್ವಾಳದಲ್ಲಿ ಎನ್.ಪಿ.ಎಸ್. ನೌಕರರ ಸಂಘದಿಂದ ರಕ್ತ ಕೊಟ್ಟೇವು, ಪಿಂಚಣಿ ಬಿಡೆವು ಸತ್ಯಾಗ್ರಹ

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಹಳೇ ಪಿಂಚಣಿ ಮರುಜಾರಿಗೆ ಹಕ್ಕೊತ್ತಾಯವಾಗಿ ಬಿ.ಸಿ.ರೋಡಿನ ಸರಕಾರಿ ನೌಕರರ ಭವನದಲ್ಲಿ ರಕ್ತ ಕೊಟ್ಟೇವು, ಪಿಂಚಣಿ ಬಿಡೆವು ಎಂಬ ರಕ್ತದಾನ ಸತ್ಯಾಗ್ರಹ ನಡೆಯಿತು.

ಜಾಹೀರಾತು

ಶಾಸಕ, ಜಿಪಂ, ತಾಪಂ ಸದಸ್ಯರ ಸಹಿತ ರಾಜಕಾರಣಿಗಳು ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು. ಇದನ್ನು ಬೆಂಬಲಿಸಿ ಆಗಮಿಸಿದ ಶಾಸಕ ರಾಜೇಶ್ ನಾಯ್ಕ್, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸರಕಾರದ ಮಟ್ಟದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ,  ಜಿ.ಪಂ ಸದಸ್ಯ ರಾದ ಎಂ. ಎಸ್. ಮಹಮ್ಮದ್, ತುಂಗಪ್ಪ ಬಂಗೇರ, ತಾ.ಪಂ ಸದಸ್ಯ ರಾದ ಸಂಜೀವ ಪೂಜಾರಿ, ಗಣೇಶ್ ಸುವರ್ಣ, ಮಾಜಿ ಸದಸ್ಯ ದಿನೇಶ್ ಅಮ್ಟೂರು, ವಿವಿಧ ಶಿಕ್ಷಣ ಸಂಘಟನೆಗಳ ಪ್ರಮುಖರಾದ ಉಮಾನಾಥ ರೈ ಮೇರಾವು, ರಮೇಶ್ ನಾಯಕ್ ರಾಯಿ, ರಮಾನಂದ ರಾಯಿ, ಶಿವಪ್ರಸಾದ್ ಶೆಟ್ಟಿ, ಜಿನ್ನಪ್ಪ, ಜೋಯಲ್ ಲೋಬೋ, ಮಹೇಶ್ ಕರ್ಕೇರ, ಮಹಮ್ಮದ್ ತುಂಬೆ, ರಾಮಚಂದ್ರ ರಾವ್,  ರಕ್ತನಿಧಿ ಮುಖ್ಯಸ್ಥ ಶರತ್ , ಜನಾರ್ಧನ್, ರಮಾನಂದ ನೂಜಿಪ್ಪಾಡಿ, ಸೇಸಪ್ಪ ಮೂಲ್ಯ ವೇದಿಕೆಯಲ್ಲಿದ್ದರು. ತಾಲೂಕು ಸಂಘದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಪ್ರಸ್ತಾವನೆಗೈದರು. ಜಯರಾಮ್ ಸ್ವಾಗತಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರೂ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು. ಅವಿನಾಶ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಎನ್.ಪಿ.ಎಸ್. ನೌಕರರ ಸಂಘದಿಂದ ರಕ್ತ ಕೊಟ್ಟೇವು, ಪಿಂಚಣಿ ಬಿಡೆವು ಸತ್ಯಾಗ್ರಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*