ಬಂಟ್ವಾಳ

ಬಂಟ್ವಾಳದ ಸುಸಜ್ಜಿತ ಆಸ್ಪತ್ರೆಗೆ ಅರಿವಳಿಕೆ ತಜ್ಞರ ಕೊರತೆ ನೀಗಿಸಲು ಕ್ರಮ – ಸಂಸದ ನಳಿನ್

ಈಗಾಗಲೇ ಆಧುನೀಕರಣಗೊಂಡಿರುವ ಬಂಟ್ವಾಳದಲ್ಲಿರುವ ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರ ಸಹಿತ ವೈದ್ಯರ ಕೊರತೆ ಇದ್ದು, ಅದನ್ನು ನೀಗಿಸಲು ಖಾಸಗಿ ಸಹಭಾಗಿತ್ವದೊಂದಿಗೆ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ಜಾಹೀರಾತು

ಶುಕ್ರವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಅರಿವಳಿಕೆ ತಜ್ಞರ ಸಹಿತ ಡ್ಯೂಟಿ ಡಾಕ್ಟರ್ ಗಳ ಕೊರತೆ ಆಸ್ಪತ್ರೆಗಿದೆ ಎಂದರು. ಈ ಸಂದರ್ಭ ಉತ್ತರಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಶಾಸಕ ರಾಜೇಶ್ ನಾಯ್ಕ್, ತಾಲೂಕು ಆರೋಗ್ಯಾಧಿಕಾರಿಗಳು ಸಭೆಯೊಂದನ್ನು ನಿಗದಿಪಡಿಸಿ, ವೈದ್ಯರ ಕೊರತೆ ಸಹಿತ ಆಸ್ಪತ್ರೆಗೆ ಅಗತ್ಯವಾಗಿ ಬೇಕಾದ ವಿಚಾರಗಳನ್ನು ಚರ್ಚಿಸಲು ಸಲಹೆ ನೀಡಿದರು. ಇದೇ ವೇಳೆ ಮಂಗಳೂರಿನ ಎ.ಜೆ. ಆಸ್ಪತ್ರೆಯು ಬಂಟ್ವಾಳ ಸರಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಮುಂದೆ ಬಂದಿದ್ದು, ಆಸ್ಪತ್ರೆಗೆ ಬೇಕಾದ ಅಗತ್ಯ ವಿಚಾರಗಳಿಗೆ ಪೂರ್ಣ ಸಹಯೋಗ ನೀಡುವುದಾಗಿ ಎ.ಜೆ.ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಶಾಂತ್ ಮಾರ್ಲ ಹೇಳಿದರು.

ಇಎನ್ ಟಿ ಸರ್ಜನ್ ಇದ್ದರೂ ಉಪಕರಣಗಳ ಕೊರತೆ ಇದೆ, ಆಸ್ಪತ್ರೆಗೊಂದು ಎಸ್.ಟಿ.ಪಿ.ಯ ಅಗತ್ಯವಿದೆ, ಸಿಬ್ಬಂದಿಗಳ ಕೊರತೆಯೂ ಇದ್ದು, ಅದನ್ನು ನೀಗಿಸಬೇಕಾಗಿದೆ ಎಂದು ಸಮದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಸದಾಶಿವ ಮಾಹಿತಿ ನೀಡಿದರು.

ಕಳೆದ ಸಾಲಿನ ಖರ್ಚು ವೆಚ್ಚಗಳ ಪಟ್ಟಿಯನ್ನು ನೀಡುತ್ತಿದ್ದ ಸಂದರ್ಭ ಲೆಕ್ಕಾಧಿಕಾರಿಯನ್ನು ಪ್ರಶ್ನಿಸಿದ ಸಂಸದ ನಳಿನ್, ಇಲ್ಲಿನ ಲೆಕ್ಕಪತ್ರವನ್ನು ಸರಿಯಾಗಿ ಕೊಟ್ಟಿಲ್ಲ. ಸಿಸ್ಟಮೇ ಸರಿ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಎಕ್ಸ್ ರೇ ಮತ್ತಿತರ ವಿಷಯಗಳಲ್ಲಿ ಒಂದೇ ವಿಷಯಕ್ಕೆ ಹೊಂದಿಕೊಂಡಂತಿರುವ ಖರ್ಚು ವೆಚ್ಚಗಳ ಪಟ್ಟಿಯನ್ನು ತೋರಿಸುವಾಗ ಸಮರ್ಪಕ ರೀತಿಯಲ್ಲಿ ಒದಗಿಸಬೇಕು, ಈಗ ಕೊಟ್ಟ ಲೆಕ್ಕಪತ್ರದ ವಿಧಾನ ಪರಿಪೂರ್ಣವಾಗಿಲ್ಲ. ಹೀಗಿದ್ದಾಗ ಶಾಸಕರು ಇದನ್ನು ಅನುಮೋದಿಸುವುದಾದರೂ ಹೇಗೆ ಎಂದು ಪ್ರಶ್ನಿಸಿ, ಮುಂದಿನ ಬಾರಿ ಹೀಗಾಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಿದರು.

ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಜಿಪಂ ಸದಸ್ಯ ತುಂಗಪ್ಪ ಬಂಗೇರ, ಮಂಗಳೂರು ಎ.ಜೆ.ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಶಾಂತ್ ಮಾರ್ಲ,   ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡಾ.ಸದಾಶಿವ  ,ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ವೈದ್ಯಾಧಿಕಾರಿ ಡಾ.ಸುರೇಂದ್ರ ನಾಯ್ಕ್ ಆಸ್ಪತ್ರೆಯ ವಿವಿಧ ವಿಭಾಗದ ಮುಖ್ಯಸ್ಥರು, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ದೇವದಾಸ ಶೆಟ್ಟಿ, ಜಿ.ಆನಂದ, ಮೋನಪ್ಪ ದೇವಸ್ಯ, ರಾಮದಾಸ ಬಂಟ್ವಾಳ, ದೇವಪ್ಪ ಪೂಜಾರಿ,  ಗಣೇಶ್ ರೈ ಮಾಣಿ, ಪ್ರಭಾಕರ ಪ್ರಭು ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.