ಆಧುನಿಕ ಜೀವನ ಶೈಲಿ ಹಾಗೂ ಒತ್ತಡದ ಬದುಕಿನಿಂದ ಮಾನಸಿಕ ತೊಂದರೆ ಅನುಭವಿಸುವ ಸ್ಥಿತಿ ಇದೆ ಎಂದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ನೇತ್ರಾಧಿಕಾರಿ ಶಾಂತ್ ರಾಜ್ ಹೇಳಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದರು. ಯೋಗ, ಧ್ಯಾನ, ಪ್ರಾಣಾಯಾಮ ಗಳ ಮೂಲಕ ಪರಿಹಾರ ಕಂಡುಕೊಳ್ಳಿ , ಮಾನಸಿಕ ಒತ್ತಡ ಹಾಗೂ ದೈಹಿಕ ಸಮಸ್ಯೆಗಳಿಗೆ ತಜ್ಞರ ನೆರವಿನ ಅಗತ್ಯ ಇದೆ. ಅಲ್ಪಾವಧಿ ಬದುಕನ್ನು ಸುಂದರವಾಗಿಸಿ ಎಂದು ಅಭಿಪ್ರಾಯ ಪಟ್ಟರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ಸ್ವಾಗತ ನೀಡಿದರು . ಪಲ್ಲವಿ ಕಾರಂತ್ ಧನ್ಯವಾದ ಸಮರ್ಪಣೆ ಮಾಡಿದರು.