ಬಂಟ್ವಾಳ

ಬಿಲ್ಲವ ಸಮಾಜ ಸೇವಾ ಸಂಘ ಮಹಿಳಾ ಸಮಿತಿ ವತಿಯಿಂದ ಶುದ್ದ ಕುಡಿಯುವ ನೀರಿನ ಯಂತ್ರ ಕೊಡುಗೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಮಹಿಳಾ ಸಮಿತಿಯ ವತಿಯಿಂದ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣಕ್ಕೆ ಶುದ್ದ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಿದರು.

ಜಾಹೀರಾತು

ಈ ಸಂದರ್ಭ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸಭಾಂಗಣದಲ್ಲಿ ಮದುವೆ ಮತ್ತಿತರ ಶುಭಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ ಇಂತಹ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಶುದ್ದ ಕುಡಿಯುವ ನೀರಿನ ಯಂತ್ರವನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಘಟಕ ಕೊಡುಗೆಯಾಗಿ ನೀಡಿದೆ. ಇದು ಅಭಿನಂದನೀಯ ಎಂದರು.

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಮುಖರಾದ ಬಿ. ವಿಶ್ವನಾಥ , ಸಂಜೀವ ಪೂಜಾರಿ, ರಮೇಶ್, ಉಮೇಶ್ ಸುವರ್ಣ, ಗೋಪಾಲ ಸುವರ್ಣ ತುಂಬೆ, ಸತೀಶ್, ಜನಾರ್ದನ ಸಾಲ್ಯಾನ್ ದರಿಬಾಗಿಲು, ಮೋನಪ್ಪ ಮಜಿ ಮಹಿಳಾ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ ಭುವನೇಶ್, ಉಪಾಧ್ಯಕ್ಷೆ ರಮಣಿ ಮೋಹನ್, ಕಾರ್ಯದರ್ಶಿ ಚಂದ್ರಾವತಿ ಕುಶಲ್‌ರಾಜ್, ಜೊತೆ ಕಾರ್ಯದರ್ಶಿ ಅಮಿತಾ ವಿಶ್ವನಾಥ್, ಮಾಜಿ ಅಧ್ಯಕ್ಷೆ ಮಾಲತಿ ಎಸ್. ಪೂಜಾರಿ, ಶುಭಾ ಇಂದಿರೇಶ್, ಜಯಶ್ರೀ ಸುರೇಶ್ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ