ಪ್ರಮುಖ ಸುದ್ದಿಗಳು

ಒಡಿಶಾ ಕರಾವಳಿಗೆ ಅಪ್ಪಳಿಸಿದ ತಿತ್ಲಿ ಚಂಡಮಾರುತ, ಹಲವೆಡೆ ಹಾನಿ

ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126-140 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ  ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ. ಚಂಡಮಾರುತದಿಂದ ಹಲವೆಡೆ ಅಪಾರ ಪ್ರಮಾಣದ ಭೂಮಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ  ಇಲಾಖೆ ತಿಳಿಸಿದೆ.

ಚಿತ್ರ : @ndmaindia

ಪ್ರಚಂಡ ಬಿರುಗಾಳಿಯಿಂದಾಗಿ ಅನೇಕ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಕೆಲವು ಮನೆಗಳಿಗೆ ಹಾನಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿಮಾನ ಮತ್ತು ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶದಲ್ಲೂ ಚಂಡಮಾರುತದ ಪರಿಣಾಮ ಎದುರಾಗಿದೆ. ಕಾಳಿಂಗಪಟ್ಟಣಂನಲ್ಲಿ ಗಂಟೆಗೆ 56 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ 3 ಲಕ್ಷಕ್ಕೂ ಅಧಿಕ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.ಚಂಡಮಾರುತದಿಂದ ಹಲವೆಡೆ ಭಾರೀ ಪ್ರಮಾಣದಲ್ಲಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆತಂಕ ವ್ಯಕ್ತಪಡಿಸಿದರೂ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ ಚಂಡಮಾರುತದ ತೀವ್ರತೆ ತಗ್ಗುವ ಸಾಧ್ಯತೆಯೂ ಇದೆ.

ಜಾಹೀರಾತು

ಗೋಪಾಲ್ಪುರದಲ್ಲಿ ಗಂಟೆಗೆ 126 ಕಿ. ಮೀ. ಆಂಧ್ರಪ್ರದೇಶದ ಕಾಳಿಂಗಪಟ್ಟಣ್ಣಂನಲ್ಲಿ ಗಂಟೆಗೆ 56 ಕಿಲೋ ಮೀಟರ್ ವೇಗದಲ್ಲಿ ಗಾಳಿ  ಬೀಸುತ್ತಿರುವ ಬಗ್ಗೆ ವರದಿಯಾಗಿದೆ. ತಿತ್ಲಿ ಚಂಡಮಾರುತದ ಪರಿಣಾಮ  ಗಂಜಾಂ, ಗಜಪತಿ, ಪೂರಿ, ಕುರ್ದಾ, ಜಗತ್ ಸಿಂಗ್ ಪುರ್ ಮೊದಲಾದ ಐದು ಜಿಲ್ಲೆಗಳಲ್ಲಿ ಬೀರುಗಾಳಿ ಸಹಿತ ಮಳೆಯಾಗುತ್ತಿದ್ದು, ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ. ತೀವ್ರ ತರ ಚಂಡಮಾರುತದಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಬಿದಿದ್ದು, ಕೆಲ ಮನೆಗಳಿಗೆ ಹಾನಿಯಾಗಿದೆ. ಗೋಪಾಲ್ಪುರ , ಮೊದಲಾದ ಕಡೆಗಳಲ್ಲಿ ರಸ್ತೆ ಸಂಪರ್ಕ  ಅಸ್ತವ್ಯಸ್ತಗೊಂಡಿದೆ.

ತಿತ್ಲಿ ಚಂಡಮಾರುತದ ಕುರಿತು ಭೀತಿ ಬೇಡ ಎಂಬ ಧೈರ್ಯ ತುಂಬಿ ಮರಳುಚಿತ್ರ ಬಿಡಿಸಿದ ಖ್ಯಾತ ಕಲಾವಿದ ಸುದರ್ಶನ ಪಟ್ನಾಯಕ್.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts