ಬಂಟ್ವಾಳ

ಡಿ.22ರಂದು ಚೆನ್ನೈತ್ತೋಡಿ ಶಾಲಾ ಶತಮಾನೋತ್ಸವ: ಪ್ರಚಾರ ಆಂದೋಲನಕ್ಕೆ ಚಾಲನೆ

ಚೆನ್ನೈತ್ತೋಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.೨೨ರಂದು ಶತಮಾನೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಆಂದೋಲನಕ್ಕೆ ಶನಿವಾರ ಚಾಲನೆ ದೊರೆಯಿತು.


ಶಾಲಾ ವ್ಯಾಪ್ತಿಯ ಪ್ರತೀ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಶತಮಾನೋತ್ಸವದ ಬಗ್ಗೆ ಮಾಹಿತಿ ನೀಡುವುದು, ಶತಮಾನೋತ್ಸವಕ್ಕೆ ಪೂರ್ವಭಾವಿಯಾಗಿ ಭೋಜನ ಶಾಲೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದು, ಶತಮಾನೋತ್ಸವಕ್ಕೆ ಮುನ್ನ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದು, ಶಾಲೆಯಲ್ಲಿ ಕಲಿತಿರುವ ಹಿರಿಯ ವಿದ್ಯಾರ್ಥಿಗಳ ದಾಖಲೀಕರಣ ನಡೆಸಿ ಅವರಿಗೆ ಶತಮಾನೋತ್ಸವದ ಮಾಹಿತಿ ನೀಡುವ ಬಗ್ಗೆ ಚರ್ಚಿಸಲಾಯಿತು.

ಜಾಹೀರಾತು

ಶತಮಾನೋತ್ಸವದಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಸಾಂಸ್ಕ್ರತಿಕ ಕಾರ್ಯಕ್ರಮಗಳ ಪ್ರದರ್ಶನ, ಗುರುವಂದನೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಅ.೨೧ರಂದು ಸಮಾಲೋಚನಾ ಸಭೆ ಮತ್ತು ಗ್ರಾಮ ಪ್ರಚಾರ ಕಾರ್ಯ ನಡೆಸಲು ನಿರ್ಧರಿಸಲಾಯಿತು. ಗ್ರಾಮ ಪಂಚಾಯತು ಸದಸ್ಯ ಕಾಪು ಜಯರಾಮ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ, ಸಂಚಾಲಕ ನಾರಾಯಣ ಶೆಟ್ಟಿ ಪರಾರಿ, ಸಲಹೆಗಾರ ಗೋಪಾಲ ಅಂಚನ್, ಪ್ರಧಾನ ಕಾರ್ಯದರ್ಶಿ ಡೇನಿಸ್ ಫೆರ್ನಾಂಡೀಸ್, ಸಮಿತಿ ಪ್ರಮುಖರಾದ ವಿಜಯ ರೈ, ಚಂದ್ರಶೇಖರ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ,ಮೋಹನದಾಸ ಗಟ್ಟಿ, ಪ್ರಕಾಶ್ ಗಟ್ಟಿ, ಜನಾರ್ದನ ಶೆಟ್ಟಿ, ಪ್ರಮೀಳ, ಶ್ಯಾಮಪ್ರಸಾದ ಪೂಂಜ, ಕಮಲ್ ಶೆಟ್ಟಿ ಬೊಳ್ಳಾಜೆ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಾನೆಟ್ ಸ್ವಾಗತಿಸಿದರು. ಶೌಕತ್ ಆಲಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.