ನಿರೀಕ್ಷೆಯಂತೆ ಬಂಟ್ವಾಳ ತಾಲೂಕು ಕೃಷಿಯುತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರ ಮತ್ತೆ ಕಾಂಗ್ರೆಸ್ ಪಾಲಾಗಿದೆ. ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಅವಿರೋಧವಾಗಿ ಪುನರಾಯ್ಕೆಯಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು.
ಎರಡನೇ ಅವಧಿಗೆ ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದ ಸಂದರ್ಭ ಪದ್ಮನಾಭ ರೈ ಮತ್ತು ಚಂದ್ರಶೇಖರ ಪೂಜಾರಿ ಅವರಿಬ್ಬರೇ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
ಬಂಟ್ವಾಳ ಎಪಿಎಂಸಿಯ ಸದಸ್ಯರಿವರು.
ಎಪಿಎಂಸಿಯಲ್ಲಿ ಒಟ್ಟು 13 ಚುನಾಯಿತ ಹಾಗೂ ಮೂವರು ನಾಮನಿರ್ದೇಶಿತ ಸದಸ್ಯರಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ವೇಳೆ ನಾಮನಿರ್ದೇಶಿತ ಸದಸ್ಯರ ಮತ ಗಣನೆಗೆ ಬರುತ್ತದೆ. ಈ ಬಾರಿ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ. 13 ಸದಸ್ಯರ ಪೈಕಿ ಬಿಜೆಪಿ 7 ಮತ್ತು ಕಾಂಗ್ರೆಸ್ 6 ಬೆಂಬಲಿತರನ್ನು ಹೊಂದಿದೆ. ಆದರೆ ಮೂವರು ನಾಮನಿರ್ದೇಶಿತರಾಗಿ ಹರೀಶ್ ಕೊಟ್ಟಾರಿ, ಕಾಂಚಲಾಕ್ಷಿ ಮತ್ತು ಆಲ್ಫೋನ್ಸ್ ಮಿನೇಜಸ್ ಅವರನ್ನು ನೇಮಿಸಿ ಆದೇಶ ಹೊರಡಿಸಿತ್ತು. ಇವರು ಮೂವರೂ ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರಾದ ಕಾರಣ ಸಹಜವಾಗಿಯೇ ಅಧ್ಯಕ್ಷ, ಉಪಾಧ್ಯಕ್ಷರು ಅದೇ ಪಕ್ಷಕ್ಕೆ ಸೇರಿದವರು ಆಗುತ್ತಾರೆ ಎಂದು ಖಚಿತವಾಗಿತ್ತು.
ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ ಅವರು ಚುನಾವಣಾ ಪ್ರಕ್ರಿಯೆ ನಡೆಸಿದರು. ಎ.ಪಿ.ಎಂ.ಸಿ ಕಾರ್ಯದರ್ಶಿ ಭಾರತಿ , ಪ್ರಭಾರ ಉಪತಹಶೀಲ್ದಾರ ಸೀತರಾಮ, ಚುನಾವಣಾ ಶಾಖಾ ಸಿಬ್ಬಂದಿ ರಾಜ್ ಕುಮಾರ್ ಸಹಕರಿಸಿದರು.
ಅಭಿನಂದನೆ:
ನೂತನವಾಗಿ ಆಯ್ಕೆಯಾದ ಕೆ.ಪದ್ಮನಾಭ ರೈ ಮತ್ತು ಚಂದ್ರಶೇಖರ ಪೂಜಾರಿ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಕ್ಷ ಪ್ರಮುಖರಾದ ಮೊಹಮ್ಮದ್ ನಂದಾವರ ಸಹಿತ ಪ್ರಮುಖರು ಅಭಿನಂದನೆ ಸಲ್ಲಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…